Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದ ಮೇಲೆ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಸರ್ವೇಶ್ವರಸ್ವಾಮಿ ಅವನನ್ನು ಹರಸಿ ಮಹಾ ಬಲಾಢ್ಯನಾಗುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನ ಮಗನಾದ ಸೊಲೊಮೋನನು ತನ್ನ ದೇವರಾದ ಯೆಹೋವನಿಂದ ಸಹಾಯವನ್ನೂ ವಿಶೇಷವೃದ್ಧಿಯನ್ನೂ ಹೊಂದಿದವನಾಗಿ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರಾದ ಯೆಹೋವನು ದಾವೀದನ ಮಗನಾದ ಸೊಲೊಮೋನನೊಂದಿಗೆ ಇದ್ದುದರಿಂದ ಸೊಲೊಮೋನನು ಬಹು ಬಲಿಷ್ಠನಾದ ಅರಸನಾಗಿ ಪ್ರಖ್ಯಾತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದಲ್ಲಿ ಬಲಗೊಂಡನು ಮತ್ತು ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದು, ಅವನನ್ನು ಉನ್ನತನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:1
17 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.


ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯವು ಬಹಳವಾಗಿ ಬಲಗೊಂಡಿತು.


ಯೆಹೋವನು ಯೋಸೇಫನ ಸಂಗಡ ಇದ್ದುದರಿಂದ ಅವನು ಕೃತಾರ್ಥನಾದನು. ಐಗುಪ್ತನಾದ ತನ್ನ ದಣಿಯ ಮನೆಯೊಳಗೆ ಯೋಸೇಫನು ಸೇವಕನಾದನು.


ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ.


ನೀನು ಹೋದಲ್ಲೆಲ್ಲಾ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.


ಯೆಹೋಯಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.


ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.


ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ದೇವದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ, ದೇವದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿಯೂ ಬರೆದಿರುತ್ತದೆ.


ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.


ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.


ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.


ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.


ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.


ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲು ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕುಳಿತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲರೆಲ್ಲರೂ ವಿಧೇಯರಾಗಿ ನಡೆಯುವವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು