Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಗೋತ್ರ ಪ್ರಧಾನರಾದವರೊಂದಿಗೂ, ಇಸ್ರಾಯೇಲ್ ಪ್ರಭುಗಳೊಂದಿಗೂ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ತನ್ನ ಸಹಸ್ರಾಧಿಪತಿಗಳನ್ನು, ಶತಾಧಿಪತಿಗಳನ್ನು, ಸರಕಾರದ ಎಲ್ಲ ಪದಾಧಿಕಾರಿಗಳನ್ನು ಹಾಗೂ ಇಸ್ರಯೇಲ್ ಕುಲಗೋತ್ರಗಳ ನಾಯಕರನ್ನು ಬರಮಾಡಿ, ಅವರ ಸಮೇತ ಗಿಬ್ಯೋನಿನಲ್ಲಿದ್ದ ಪೂಜಾಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಂದರೆ ಅವರ ಶತಾಧಿಪತಿ ಸಹಸ್ರಾಧಿಪತಿಗಳನ್ನೂ ನ್ಯಾಯಾಧಿಪತಿಗಳನ್ನೂ ಗೋತ್ರಪ್ರಧಾನರಾದ ಇಸ್ರಾಯೇಲ್ ಪ್ರಭುಗಳನ್ನೂ ಕರಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2-3 ಸೊಲೊಮೋನನು ಇಸ್ರೇಲರನ್ನೂ ಅಂದರೆ ನ್ಯಾಯಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಸೇನಾಧಿಪತಿಗಳನ್ನೂ ಕುಲಪ್ರಧಾನರನ್ನೂ ಕರೆಯಿಸಿ ಅವರೊಂದಿಗೆ ಗಿಬ್ಯೋನಿನ ಉನ್ನತಸ್ಥಳಕ್ಕೆ ಹೋದನು. ದೇವದರ್ಶನಗುಡಾರವು ಅಲ್ಲಿತ್ತು. ಅರಣ್ಯದಲ್ಲಿ ಇಸ್ರೇಲರು ಪ್ರಯಾಣಿಸುತ್ತಿದ್ದಾಗ ಯೆಹೋವನ ಸೇವಕನಾದ ಮೋಶೆಯು ಗುಡಾರವನ್ನು ಮಾಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಪ್ರಧಾನರಾದವರೊಂದಿಗೂ, ಸಮಸ್ತ ಇಸ್ರಾಯೇಲರ ಪಿತೃಗಳ ಶ್ರೇಷ್ಠರಾದ ಸಮಸ್ತ ಪ್ರಭುಗಳೊಂದಿಗೂ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:2
13 ತಿಳಿವುಗಳ ಹೋಲಿಕೆ  

ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.


ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.


ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು.


ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.


ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.


ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.


ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,


ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.


ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.


ದಾವೀದನು ಸಹಸ್ರಾಧಿಪತಿ, ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಸಮಾಲೋಚನೆ ಮಾಡಿದ ನಂತರ ಇಸ್ರಾಯೇಲ್ಯರ ಸಮಸ್ತ ಸಮೂಹದವರಿಗೆ,


ಅವನ ಸಂಗಡ ಇದ್ದ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿರುವ ಪೂಜಾಸ್ಥಳಕ್ಕೆ ಹೋದನು. ಏಕೆಂದರೆ ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿದ ದೇವದರ್ಶನದ ಗುಡಾರವು ಅಲ್ಲಿತ್ತು.


ಒಮ್ಮೆ ಅರಸನಾದ ಸೊಲೊಮೋನನು ಯಜ್ಞಮಾಡುವುದಕ್ಕಾಗಿ ಪೂಜಾಸ್ಥಳಗಳಲ್ಲಿ ಪ್ರಧಾನವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ಯಜ್ಞವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು