Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರೂ ಮತ್ತು ಲೇವಿಯರೂ ಅವನೊಡನೆ ಬಂದು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೆಹೂದ, ಬೆನ್ಯಾಮೀನ್ ಕುಲಗಳವರು ಅವನ ಸ್ವಾಧೀನದಲ್ಲಿದ್ದುದಲ್ಲದೆ ಬೇರೆ ಎಲ್ಲ ಇಸ್ರಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರು ಹಾಗೂ ಲೇವಿಯರು ಅವನೊಡನೆ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೂದ ಬೆನ್ಯಾಮೀನ್ ಕುಲಗಳವರು ಅವನ ಸ್ವಾಧೀನದಲ್ಲಿದ್ದದ್ದಲ್ಲದೆ ಬೇರೆ ಎಲ್ಲಾ ಇಸ್ರಾಯೇಲ್ ಪ್ರಾಂತಗಳಲ್ಲಿದ್ದ ಯಾಜಕರೂ ಲೇವಿಯರೂ ಅವನೊಡನೆ ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲ್ ಪ್ರಾಂತ್ಯದಲ್ಲಿದ್ದ ಯಾಜಕರೂ ಲೇವಿಯರೂ ರೆಹಬ್ಬಾಮನನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜಕರೂ, ಲೇವಿಯರೂ ತಮ್ಮ ಸಮಸ್ತ ಪ್ರಾಂತಗಳಿಂದ ಅವನ ಬಳಿಗೆ ಪುನಃ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:13
11 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಪಟ್ಟಣದಲ್ಲಿ ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿ, ಅವುಗಳನ್ನು ಮತ್ತಷ್ಟು ಭದ್ರಪಡಿಸಿದನು. ಯೆಹೂದ ಬೆನ್ಯಾಮೀನ್ ಕುಲಗಳು ಅವನ ಸ್ವಾಧೀನದಲ್ಲಿದ್ದವು.


ಲೇವಿಯರು ಯೆಹೋವನಿಗೆ ಯಾಜಕ ಸೇವೆ ಮಾಡದಂತೆ ಯಾರೊಬ್ಬಾಮನೂ ಮತ್ತು ಅವನ ಮಕ್ಕಳೂ ಅವರನ್ನು ಬಹಿಷ್ಕರಿಸಿದ್ದರಿಂದ ಲೇವಿಯರು ತಮ್ಮ ಹುಲ್ಲುಗಾವಲುಗಳಿದ್ದ ತಮ್ಮ ಆಸ್ತಿಗಳನ್ನು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.


ಇವರು ಯೆಹೂದದಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲರ ಗೋತ್ರ ಪ್ರಧಾನರನ್ನೂ ಒಟ್ಟುಗೂಡಿಸಲು ಅವರು ಯೆರೂಸಲೇಮಿಗೆ ಬಂದರು.


ನೀವು ನಿಮ್ಮ ದೇಶದಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು, ಜ್ಞಾಪಕವಿರಲಿ.


ನಿಮ್ಮ ದೇಶವು ಅಶುದ್ಧವಾಗಿದೆ ಎಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿರುವ ಸ್ವತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.


ಯೆಹೂದ್ಯ ಪ್ರಾಂತ್ಯದಲ್ಲಿದ್ದ ಇಸ್ರಾಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.


ಇಸ್ರಾಯೇಲರ ಅರಸನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.


ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.


ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಕೋಟೆಯನ್ನು ಭದ್ರಪಡಿಸಿದನು.


ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.


ಒಂದು ವೇಳೆ ನೀವು ‘ಯೆಹೋವನ ಹೊರೆ’ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, ‘ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು