Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸವಾಗಿದ್ದು ಯೆಹೂದ ಸಂರಕ್ಷಣೆಗಾಗಿ ಪಟ್ಟಣಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ರೆಹಬ್ಬಾಮನು ಜೆರುಸಲೇಮಿನಲ್ಲಿ ವಾಸವಾಗಿದ್ದು ಜುದೇಯದ ಈ ಕೆಳಕಂಡ ಪಟ್ಟಣಗಳನ್ನು ಭದ್ರಪಡಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ರೆಹಬ್ಬಾಮನು ಯೆರೂಸಲೇವಿುನಲ್ಲಿ ವಾಸವಾಗಿದ್ದು ಯೆಹೂದದ ಪಟ್ಟಣಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ರೆಹಬ್ಬಾಮನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಯುದ್ಧದಲ್ಲಿ ರಕ್ಷಿಸಿಕೊಳ್ಳಲು ಅವನು ಯೆಹೂದದಲ್ಲಿ ಭದ್ರವಾದ ಪಟ್ಟಣಗಳನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ, ಯೆಹೂದದಲ್ಲಿ ಕೋಟೆಯುಳ್ಳ ಪಟ್ಟಣಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:5
14 ತಿಳಿವುಗಳ ಹೋಲಿಕೆ  

ಇದಲ್ಲದೆ, ಇವನು ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ, ಕಾಡುಗಳಲ್ಲಿ ದುರ್ಗಗಳನ್ನೂ, ಗೋಪುರಗಳನ್ನೂ ಕಟ್ಟಿಸಿದನು.


ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದ ದೇಶದಲ್ಲಿ ಕೋಟೆಗಳನ್ನೂ ಮತ್ತು ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.


ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮ ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.


ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ, ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿರಿಸಿ, ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ, ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು.


ಆ ಪಟ್ಟಣಗಳು ಯಾವುವೆಂದರೆ: ಬೇತ್ಲೆಹೇಮ್, ಏತಾಮ್, ತೆಕೋವ,


ಯೆಹೂದ ದೇಶದ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಯೆರೂಸಲೇಮನ್ನು ಸಮೀಪಿಸಿದನು.


ಅವನು ಯೆಹೂದದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ರ ಪಟ್ಟಣಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿದನು.


ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ, ಶ್ರೇಷ್ಠವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.


ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.


ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು