Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸುಭದ್ರಪಡಿಸಿಕೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಇಸ್ರಯೇಲರೆಲ್ಲರೂ ಸರ್ವೇಶ್ವರನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರೆಹಬ್ಬಾಮನು ಬಲಾಢ್ಯನಾದ ರಾಜನಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ ನಂತರ ಅವನೂ ಯೆಹೂದದ ಜನರೂ ದೇವರಾದ ಯೆಹೋವನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ, ಅವನೂ, ಅವನ ಸಂಗಡ ಸಮಸ್ತ ಇಸ್ರಾಯೇಲರೂ ಯೆಹೋವ ದೇವರ ನಿಯಮವನ್ನು ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:1
22 ತಿಳಿವುಗಳ ಹೋಲಿಕೆ  

ಇವರೆಲ್ಲರೂ ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗು ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಅಂತೆಯೇ ಯೆಹೂದ ರಾಜ್ಯವು ಆ ವರ್ಷಗಳಲ್ಲಿ ಅಭಿವೃದ್ಧಿಯಾಗಿ, ಸೊಲೊಮೋನನ ಮಗನಾದ ರೆಹಬ್ಬಾಮನು ಬಲಗೊಂಡನು.


ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ವತ್ತೊಂದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.


ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”


ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್ ದೇವತೆಯ ವಿಷಯದಲ್ಲಿ ದೋಷಿಯಾದಾಗ ನಾಶವಾಯಿತು.


ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?


“ನೀನು ಹೋಗಿ ಸೊಲೊಮೋನನ ಮಗನೂ, ಯೆಹೂದದ ಅರಸನಾದ ರೆಹಬ್ಬಾಮನಿಗೂ ಯೆಹೂದದ ಬೆನ್ಯಾಮೀನ್ ಕುಲಗಳ ಇಸ್ರಾಯೇಲರೆಲ್ಲರಿಗೂ,


ಯೆಹೂದ್ಯರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲರ ಪದ್ಧತಿಯನ್ನು ಅನುಸರಿಸಿದರು.


ಯೆಹೂದ್ಯ ಪ್ರಾಂತ್ಯದಲ್ಲಿದ್ದ ಇಸ್ರಾಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.


ಆಗ ಈ ದೇಶದವರು ಅವರಿಗೆ, ‘ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ’ ಎಂಬ ಉತ್ತರ ಹೇಳುವರು” ಎಂದನು.


ಇಸ್ರಾಯೇಲರೇ, ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ಸ್ಮರಿಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ.


ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.


ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ, ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿರಿಸಿ, ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ, ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು.


ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು.


ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಲ್ವತ್ತೊಂದು ವರ್ಷದವನಾಗಿದ್ದು, ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷಗಳ ಕಾಲ ಆಳ್ವಿಕೆ ಮಾಡಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.


ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು.


ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು