Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಯೆಹೋವನಿಗೆ ದ್ರೋಹಮಾಡಿದ್ದರಿಂದ ಅರಸನಾದ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಐಗುಪ್ತದ ಅರಸನಾದ ಶೀಶಕನು, ಸೈನಿಕರನ್ನು ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರನಿಗೆ ದ್ರೋಹಿಗಳಾದರು. ಅರಸ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ಯೆಹೋವನಿಗೆ ದ್ರೋಹಿಗಳಾದದರಿಂದ ಅರಸನಾದ ರೆಹಬ್ಬಾಮನ ಆಳಿಕೆಯ ಐದನೆಯ ವರುಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಶೀಶಕನು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ಶೀಶಕನು ಈಜಿಪ್ಟಿನ ರಾಜ. ರೆಹಬ್ಬಾಮನೂ ಯೆಹೂದ ಪ್ರಾಂತ್ಯದ ಜನರೂ ಯೆಹೋವನಿಗೆ ಅವಿಧೇಯರಾದದ್ದೇ ಈ ಮುತ್ತಿಗೆಗೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಯೆಹೋವ ದೇವರಿಗೆ ವಿಶ್ವಾಸದ್ರೋಹಮಾಡಿದ್ದರಿಂದ, ರೆಹಬ್ಬಾಮನು ಅರಸನಾದ ಐದನೆಯ ವರ್ಷದಲ್ಲಿ ಈಜಿಪ್ಟ್ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:2
17 ತಿಳಿವುಗಳ ಹೋಲಿಕೆ  

ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವುದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು ಐಗುಪ್ತದ ಅರಸನಾದ ಶೀಶಕನ ಬಳಿಗೆ ಹೋಗಿ ಸೊಲೊಮೋನನು ಜೀವದಿಂದಿರುವ ವರೆಗೆ ಅಲ್ಲಿಯೇ ಇದ್ದನು.


ನಮ್ಮ ಹೃದಯಾನಂದವು ತೀರಿತು, ನಮ್ಮ ನಾಟ್ಯ ನಲಿವುಗಳು ದುಃಖವಾಗಿ ಮಾರ್ಪಟ್ಟಿವೆ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,


ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷದವರೆಗೆ ಬಂದನು.


ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದಿಯ ಮಾರ್ಗವಾಗಿ ಕಳುಹಿಸುವ ದೇಶ, ವೇಗವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನಯವಾದ ಚರ್ಮವುಳ್ಳವರೂ, ಸರ್ವ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.


ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯ ಸೈನಿಕರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ ಸೈನಿಕರೂ ಇದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು.


ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು