Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಾವಿರದ ಇನ್ನೂರು ರಥಗಳನ್ನೂ, ಅರುವತ್ತು ಸಾವಿರ ಮಂದಿ ರಾಹುತರನ್ನೂ, ಐಗುಪ್ತದಿಂದ ಅಸಂಖ್ಯರಾದ ಲೂಬ್ಯ, ಸುಕ್ಕೀಯ, ಕೂಷ್ಯ ಸೈನಿಕರನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈಜಿಪ್ಟಿನ ಅರಸ ಶೀಶಕನು, ಸಾವಿರದ ಇನ್ನೂರು ರಥಗಳನ್ನೂ ಅರವತ್ತು ಸಾವಿರ ಮಂದಿ ರಾಹುತರನ್ನೂ ಈಜಿಪ್ಟಿನ, ಲಿಬ್ಯದ, ಸುಕ್ಕೀಯದ ಹಾಗೂ ಕೂಷ್ಯದ ಅಸಂಖ್ಯ ಸೈನಿಕರನ್ನೂ ಕೂಡಿಸಿಕೊಂಡು ಜೆರುಸಲೇಮಿಗೆ ಹೊರಟುಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಐಗುಪ್ತದ ಅರಸನಾದ ಶೀಶಕನು ಸಾವಿರದ ಇನ್ನೂರು ರಥಗಳನ್ನೂ ಅರುವತ್ತು ಸಾವಿರ ಮಂದಿ ರಾಹುತರನ್ನೂ ಐಗುಪ್ತದ ಅಸಂಖ್ಯರಾದ ಲೂಬ್ಯ ಸುಕ್ಕೀಯ ಕೂಷ್ಯ ಸೈನಿಕರನ್ನೂ ಕೂಡಿಸಿಕೊಂಡು ಯೆರೂಸಲೇವಿುಗೆ ವಿರೋಧವಾಗಿ ಹೊರಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಶೀಶಕನ ಬಳಿಯಲ್ಲಿ ಹನ್ನೆರಡು ಸಾವಿರ ರಥಗಳು, ಅರವತ್ತುಸಾವಿರ ರಾಹುತರು ಮತ್ತು ಲೆಕ್ಕಿಸಲಾರದಷ್ಟು ಸೈನಿಕರು ಇದ್ದರು. ಅವನ ಆ ದೊಡ್ಡ ಸೈನ್ಯದಲ್ಲಿ ಲಿಬ್ಯ, ಇಥಿಯೋಪ್ಯ ಮತ್ತು ಸುಕ್ಕೀಯ ದೇಶದ ಸಿಪಾಯಿಗಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನ ಸಂಗಡ ಸಾವಿರದ ಇನ್ನೂರು ರಥಗಳೂ, ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಈಜಿಪ್ಟಿನಿಂದ ಬಂದ ಲಿಬಿಯದವರೂ, ಸುಕ್ಕೀಯರೂ, ಕೂಷ್ಯರೂ ಲೆಕ್ಕವಿಲ್ಲದಷ್ಟು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:3
15 ತಿಳಿವುಗಳ ಹೋಲಿಕೆ  

ಕೂಷ್ ಮತ್ತು ಐಗುಪ್ತವು ಅದರ ಅಪಾರ ಬಲ, ಪೂಟರೂ, ಲೂಬ್ಯರೂ ಅದಕ್ಕೆ ಸಹಾಯಕರು.


ಕೂಷ್ಯ ಹಾಗೂ ಲೂಬ್ಯರ ಸೈನ್ಯವು ಅಪರಿಮಿತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೇ? ನೀನು ಯೆಹೋವನನ್ನು ಆಶ್ರಯಿಸಿಕೊಂಡದ್ದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.


ಅವನು ಬೆಳ್ಳಿ ಬಂಗಾರಗಳ ನಿಧಿನಿಕ್ಷೇಪಗಳನ್ನೂ, ಐಗುಪ್ತದ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನೂ ವಶಮಾಡಿಕೊಳ್ಳುವನು. ಲೂಬ್ಯರೂ, ಕೂಷ್ಯರೂ ಅವನನ್ನು ಹಿಂಬಾಲಿಸಿ ಹೋಗುವರು.


ಕುದುರೆ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು.


“‘ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.’”


ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯ ಉಂಟಾಗುವಂತೆ ಮಾಡಿದನು.


ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷದವರೆಗೆ ಬಂದನು.


ಅರಾಮ್ಯರು ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುನೂರು ರಥ ಸಾರಥಿಗಳನ್ನು ನಾಶ ಮಾಡಿ, ನಲ್ವತ್ತು ಸಾವಿರ ಮಂದಿ ರಾಹುತರನ್ನು ಹತ್ಯೆಮಾಡಿದನು. ಸೇನಾಧಿಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.


ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.


ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ಮಿಡತೆಗಳಂತೆ ಗುಂಪುಗುಂಪಾಗಿ ಬರುತ್ತಿದ್ದರು. ಅವರೂ ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.


ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ, ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಅನ್ಯಜನರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.


ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,


ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯ ಸೈನಿಕರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ ಸೈನಿಕರೂ ಇದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು