Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ, “ತಮ್ಮಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ಭಕ್ತಿಯನ್ನು ತೊರೆದುಬಿಡುವವರು ಚಿಕ್ಕವರಾಗಲಿ ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನು ಕೊಲ್ಲಲಾಗುವುದು” ಎಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತಮ್ಮಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲುವೆವೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯಾವನಾದರೂ ದೇವರಾದ ಯೆಹೋವನ ಸೇವೆಮಾಡಲು ನಿರಾಕರಿಸುವದಾದರೆ ಆ ವ್ಯಕ್ತಿಯು ಗಂಡಸಾಗಿದ್ದರೂ ಹೆಂಗಸಾಗಿದ್ದರೂ ಮುಖ್ಯವಾದವನಾಗಿದ್ದರೂ ಮುಖ್ಯವಲ್ಲದವನಾಗಿದ್ದರೂ ಕೊಲ್ಲಲ್ಪಡಬೇಕು ಎಂಬುದಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯಾವನಾದರೂ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕದೆ ಹೋದರೆ; ಹಿರಿಯನಾದರೂ, ಕಿರಿಯನಾದರೂ, ಪುರುಷನಾದರೂ, ಸ್ತ್ರೀಯಾದರೂ ಸಾಯಬೇಕೆಂದು ಒಡಂಬಡಿಕೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:13
16 ತಿಳಿವುಗಳ ಹೋಲಿಕೆ  

ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.


ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.


ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.


ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


“ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.


ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ಅಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲಾ. ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.


ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.


ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು.


ತುತ್ತೂರಿ ಕೊಂಬುಗಳನ್ನೂ ಊದಿಸಿ ದೊಡ್ಡ ಅರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು.


ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.


ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು