Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಸನು ಓದೇದನ ಮಗ ಅಜರ್ಯನ ಈ ಪ್ರವಾದನೋಕ್ತಿಗಳನ್ನು ಕೇಳಿ ಧೈರ್ಯಗೊಂಡನು. ಜುದೇಯ ಹಾಗೂ ಬೆನ್ಯಾಮೀನ್ ಪ್ರಾಂತ್ಯಗಳಲ್ಲೂ ತಾನು ಸ್ವಾಧೀನಮಾಡಿಕೊಂಡಿದ್ದ ಎಫ್ರಯಿಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು; ಸರ್ವೇಶ್ವರನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಬಲಿಪೀಠವನ್ನು ದುರಸ್ತಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಸನು ಓಬೇದನ [ಮಗನಾದ ಅಜರ್ಯನ] ಈ ಪ್ರವಾದನೋಕ್ತಿಗಳನ್ನು ಕೇಳಿದಾಗ ಧೈರ್ಯಗೊಂಡು ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದುಹಾಕಿ ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಆತನ ಯಜ್ಞವೇದಿಯನ್ನು ಜೀರ್ಣೋದ್ಧಾರಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರವಾದಿಯಾದ ಓಬೇದನು ತಂದ ಸಂದೇಶವನ್ನು ಆಸನು ಕೇಳಿ ತುಂಬಾ ಪ್ರೋತ್ಸಾಹಗೊಂಡನು. ಅನಂತರ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದಲ್ಲಿದ್ದ ಎಲ್ಲಾ ವಿಗ್ರಹಗಳನ್ನು ತೆಗೆದುಹಾಕಿಸಿದನು. ಗೆದ್ದಿದ್ದ ಎಫ್ರಾಯೀಮ್ ಬೆಟ್ಟಪ್ರದೇಶಗಳಲ್ಲಿದ್ದ ವಿಗ್ರಹಗಳನ್ನು ತೆಗೆದುಹಾಕಿಸಿದನು. ದೇವಾಲಯದ ಮಂಟಪದೆದುರು ಇದ್ದ ಯೆಹೋವನ ಯಜ್ಞವೇದಿಕೆಯನ್ನು ಸರಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಸನು ಆ ಮಾತುಗಳನ್ನೂ, ಪ್ರವಾದಿಯಾದ ಓದೇದನ ಮಗ ಅಜರ್ಯನ ಪ್ರವಾದನಾ ಮಾತುಗಳನ್ನೂ ಕೇಳಿದಾಗ, ಅವನು ಬಲಗೊಂಡು ಯೆಹೂದ ಬೆನ್ಯಾಮೀನಿನ ಸಮಸ್ತ ದೇಶದೊಳಗಿಂದಲೂ, ಎಫ್ರಾಯೀಮನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯೆಹೋವ ದೇವರ ದ್ವಾರಾಂಗಳದ ಮುಂದೆ ಇದ್ದ ಯೆಹೋವ ದೇವರ ಬಲಿಪೀಠವನ್ನು ನೂತನಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:8
24 ತಿಳಿವುಗಳ ಹೋಲಿಕೆ  

ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.


ಆ ಕಾಲದಿಂದ ಸೊಲೊಮೋನನು, ತಾನು ಮಂಟಪದ ಮುಂದೆ ಕಟ್ಟಿಸಿದ ಯೆಹೋವನ ಯಜ್ಞವೇದಿಯ ಮೇಲೆ,


ಇದಲ್ಲದೆ ಸೊಲೊಮೋನನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳವು ಆಗಿತ್ತು.


ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.


ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.


ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ ಮತ್ತು ಇಸ್ರಾಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿಸಲ್ಪಟ್ಟಿದ್ದವು.


ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”


ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ, ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ.


ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ, ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು. ವನವೃಕ್ಷಗಳನ್ನು ತನಗೋಸ್ಕರ ಬೆಳೆಯುವನು. ಅವನು ಪೀತದಾರವನ್ನು ನೆಡಲು, ಮಳೆಯು ಅದನ್ನು ಬೆಳೆಸುವುದು.


ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.


ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.


ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.


ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,


ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.


ಅವನು ಯೆರೂಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಮತ್ತು ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಕಟ್ಟಿಸಿದನು.


ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನು ಆರಾಧಿಸತೊಡಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.


ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.


ಅವನು ಯೆಹೂದದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ರ ಪಟ್ಟಣಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿದನು.


ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದು, ಮತ್ತೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದ ವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಿಕರ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು.


ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು.


ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಆಸನು ಯೆಹೂದದ ಅರಸನಾದನು.


ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು