Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಿಯ ಮೇಲೆ ಕುಪಿತನಾಗಿ, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಸನು ಈ ಮಾತುಗಳ ದೆಸೆಯಿಂದ ಬೇಸರಗೊಂಡು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿಸಿದನು. ಇದಲ್ಲದೆ ಜನರಲ್ಲಿ ಕೆಲವರನ್ನು ಪೀಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದನ್ನು ಕೇಳಿದ ಆಸನು ಹನಾನಿಯ ಮೇಲೆ ಬಹುಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಆಸನು ಅದೇ ಸಮಯದಲ್ಲಿ ದೇವಜನರಾದ ಕೆಲವರೊಂದಿಗೆ ಕ್ರೂರವಾಗಿ ವರ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಆಸನು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಇದರ ನಿಮಿತ್ತ ಅವನ ಮೇಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವರನ್ನು ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:10
24 ತಿಳಿವುಗಳ ಹೋಲಿಕೆ  

ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಹೇಳಿದ್ದಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.


ಆತನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಪಟ್ಟಿಯನ್ನು ಇನ್ನೂ ಹೆಚ್ಚಿಸಿಕೊಂಡನು.


ಲೋಕದ ಸೆರೆಯವರನ್ನೆಲ್ಲಾ ತನ್ನ ಕಾಲುಗಳ ಕೆಳಗೆ ತುಳಿದುಬಿಡುವುದೂ,


ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.


“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.


ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.


ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು. ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.”


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.


ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು.


ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.


ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.


ಆಗ ದಾವೀದನು ಆಗ ತಾನೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ಕರೆದು ತರುವಂತೆ ದೂತರನ್ನು ಕಳುಹಿಸಿದನು. ಆಕೆಯು ಬರಲು ಅವನು ಆಕೆಯನ್ನು ಸಂಗಮಿಸಿದನು. ಅನಂತರ ಆಕೆಯು ತನ್ನ ಮನೆಗೆ ಹೋದಳು.


‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.


ಆಸನ ಪೂರ್ವೋತ್ತರಚರಿತ್ರೆಗಳನ್ನು ಯೆಹೂದ ಮತ್ತು ಇಸ್ರಾಯೇಲ್ ರಾಜರ ಇತಿಹಾಸ ಗ್ರಂಥಗಳಲ್ಲಿ ಬರೆದಿರುತ್ತದೆ.


ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.


ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.


ಬೇತೇಲಿನ ಯಜ್ಞವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರುದ್ಧವಾಗಿ ನುಡಿದಿದ್ದನ್ನು ಕೇಳಿ, “ಕೈಚಾಚಿ ಅವನನ್ನು ಹಿಡಿಯಿರಿ” ಎಂದು ಆಜ್ಞಾಪಿಸಿದನು. ಕೂಡಲೇ ಅವನ ಕೈ ಬತ್ತಿ ಹೋಯಿತು. ಅವನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಲು ಅಗಲ್ಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು