Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮ ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅನಂತರ ಅರಸ ಆಸನು ಎಲ್ಲಾ ಯೆಹೂದ್ಯರನ್ನು ಕರೆಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರಿಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರವಾಗಿ ತೆಗೆದುಕೊಂಡುಹೋಗಿ ಗೆಬ, ವಿುಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಆಸನೂ ಇಸ್ರೇಲಿನ ಎಲ್ಲಾ ಜನರೂ ಒಟ್ಟಿಗೆ ರಾಮಕ್ಕೆ ಹೋಗಿ ಅಲ್ಲಿ ಬಾಷನು ಕೋಟೆಕಟ್ಟಲು ತಂದಿಟ್ಟಿದ್ದ ಕಲ್ಲುಮರಗಳನ್ನೆಲ್ಲಾ ತೆಗೆದು ಮಿಚ್ಪ ಮತ್ತು ಗೆಬ ಪಟ್ಟಣಗಳನ್ನು ಭದ್ರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡು ಹೋದನು. ಬಾಷನು ಕಟ್ಟಿಸುತ್ತಾ ಇದ್ದ ರಾಮ ಪಟ್ಟಣದ ಕಲ್ಲುಗಳನ್ನೂ, ಅದರ ತೊಲೆಗಳನ್ನೂ ತೆಗೆದುಕೊಂಡುಹೋಗಿ, ಅವುಗಳಿಂದ ಗಿಬೆಯ ಮತ್ತು ಮಿಚ್ಪೆ ಎಂಬ ನಗರಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:6
14 ತಿಳಿವುಗಳ ಹೋಲಿಕೆ  

ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.


ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ. ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.


ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ, ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ.


ಬೆನ್ಯಾಮೀನನ ಕುಲದಿಂದ ಗೆಬ, ಅಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಒಟ್ಟು ಪಟ್ಟಣಗಳು ಹದಿಮೂರು.


ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು, ಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.


ಸಮುವೇಲನು ಇಸ್ರಾಯೇಲ್ಯರನ್ನು ಮಿಚ್ಪೆಗೆ ಕರೆಯಿಸಿ ಯೆಹೋವನ ಸನ್ನಿಧಿಯಲ್ಲಿ ಸೇರಿಸಿಕೊಂಡನು.


ಅವನು ಇಸ್ರಾಯೇಲರ ನ್ಯಾಯಗಳನ್ನು ತೀರಿಸುವುದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರುಗಿ ಬರುತ್ತಿದ್ದನು.


ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.


ದಿಲಾನ್, ಮಿಚ್ಪೆ, ಯೊಕ್ತೇಲ್,


ಅವನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು


ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.


ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.


ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯದಲ್ಲಿ ಅವನ ಸಂಗಡ ವಾಸಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು