Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರುವಲ್ಲಿ ನಿಮಗೆ ಯೆಹೋವನ ಭಯವು ಇರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ ಮುಖದಾಕ್ಷಿಣ್ಯವೂ ಲಂಚತಿನ್ನುವದೂ ಇಲ್ಲವಾದದರಿಂದ ಜಾಗರೂಕತೆಯಿಂದ ಕೆಲಸಮಾಡಿರಿ ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮಲ್ಲಿ ಪ್ರತಿಯೊಬ್ಬರೂ ಯೆಹೋವನಿಗೆ ಭಯಪಡುವವರಾಗಿರಬೇಕು. ಆತನು ನ್ಯಾಯವಂತನಾಗಿದ್ದಾನೆ. ಆತನಿಗೆ ಎಲ್ಲಾ ಜನರು ಸಮಾನರೇ. ಆತನು ಲಂಚ ಸ್ವೀಕರಿಸಿ ನ್ಯಾಯವನ್ನು ಬದಲಾಯಿಸುವದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದಕಾರಣ ಯೆಹೋವ ದೇವರ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡೆಯಿರಿ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಅನ್ಯಾಯವಾದರೂ, ಮುಖದಾಕ್ಷಿಣ್ಯವಾದರೂ, ಲಂಚ ತೆಗೆದುಕೊಳ್ಳುವುದಾದರೂ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:7
27 ತಿಳಿವುಗಳ ಹೋಲಿಕೆ  

ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.


ದೇವರಲ್ಲಿ ಪಕ್ಷಪಾತವಿಲ್ಲ.


ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.


ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪಕ್ಷಪಾತವಿರುವುದಿಲ್ಲ.


ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.


ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.


ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.


ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.


ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.


ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,


ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವನೋ?


ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.


ನೀವು ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.


“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು