Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ, ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಲೇವಿಯರಿಂದಲೂ, ಯಾಜಕರಿಂದಲೂ, ಇಸ್ರಾಯೇಲ್ ಗೋತ್ರ ಪ್ರಧಾನರಿಂದಲೂ, ಕೆಲವರನ್ನು ಆರಿಸಿ ಯೆಹೋವನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ, ಕಲಹಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವುದಕ್ಕಾಗಿ ಅವರನ್ನು ಯೆರೂಸಲೇಮಿನಲ್ಲೇ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ ಯೆಹೋಷಾಫಾಟನು ತನ್ನ ಪರಿವಾರದೊಡನೆ ಜೆರುಸಲೇಮಿಗೆ ಹಿಂದಿರುಗಿ ಬಂದು, ಲೇವಿಯರಿಂದ, ಯಾಜಕರ ಹಾಗು ಇಸ್ರಯೇಲ್ ಗೋತ್ರಪ್ರಧಾನರಿಂದ ಕೆಲವರನ್ನು ಆರಿಸಿ, ಸರ್ವೇಶ್ವರನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವ್ಯಾಜ್ಯಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರ್ಪುನೀಡಲು ಜೆರುಸಲೇಮಿನಲ್ಲೇ ಇರಿಸಿದನು. ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇವಿುಗೆ ಹಿಂದಿರುಗಿ ಬಂದು ಲೇವಿಯರಿಂದಲೂ ಯಾಜಕರಿಂದಲೂ ಇಸ್ರಾಯೇಲ್‍ಗೋತ್ರ ಪ್ರಧಾನರಿಂದಲೂ ಕೆಲವರನ್ನು ಆರಿಸಿ ಯೆಹೋವ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವ್ಯಾಜ್ಯಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವದಕ್ಕೋಸ್ಕರ ಯೆರೂಸಲೇವಿುನಲ್ಲಿ ಇರಿಸಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜೆರುಸಲೇಮಿನೊಳಗೆ ಯೆಹೋಷಾಫಾಟನು ಲೇವಿಯರಲ್ಲಿ, ಯಾಜಕರಲ್ಲಿ ಮತ್ತು ಇಸ್ರೇಲರ ನಾಯಕರಲ್ಲಿ ಕೆಲವರನ್ನು ನ್ಯಾಯಾಧಿಪತಿಗಳನ್ನಾಗಿ ಆರಿಸಿದನು. ಇವರು ಜನರ ಜಗಳಗಳನ್ನು ಮತ್ತು ಸಮಸ್ಯೆಗಳನ್ನು ಯೆಹೋವನ ಕಟ್ಟಳೆಗಳ ಪ್ರಕಾರ ತೀರಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಯೆರೂಸಲೇಮಿಗೆ ತಿರುಗಿ ಬಂದ ತರುವಾಯ ಯೆಹೋಷಾಫಾಟನು ಯೆಹೋವ ದೇವರ ನ್ಯಾಯತೀರ್ವಿಕೆಗೋಸ್ಕರವೂ, ವ್ಯಾಜ್ಯಗಳಿಗೋಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ, ಯಾಜಕರಲ್ಲಿಯೂ, ಇಸ್ರಾಯೇಲ್ ಗೋತ್ರಪ್ರಧಾನರಲ್ಲಿಯೂ ಕೆಲವರನ್ನು ನೇಮಿಸಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:8
11 ತಿಳಿವುಗಳ ಹೋಲಿಕೆ  

ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು.


ದಾವೀದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು,


ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ, ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲಾ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ.


ಅವರಿಗೆ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸಗಳು ಯಾವುದೆಂದರೆ,


ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.


ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.


ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು