Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀನು ನಮಗೆ ಅನುಗ್ರಹಿಸಿದ ಸ್ವತ್ತಿನೊಳಗಿಂದ ನಮ್ಮನ್ನು ಹೊರ ಓಡಿಸುವುದಕ್ಕಾಗಿ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀವು ನಮಗೆ ಅನುಗ್ರಹಿಸಿದ ಸೊತ್ತಿನಿಂದ ನಮ್ಮನ್ನು ಹೊರತಳ್ಳುವುದಕ್ಕಾಗಿ, ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈಗ ಇವರು ಉಪಕಾರಕ್ಕೆ ಅಪಕಾರಮಾಡಿ ನೀನು ನಮಗೆ ಅನುಗ್ರಹಿಸಿದ ಸ್ವಾಸ್ತ್ಯದೊಳಗಿಂದ ನಮ್ಮನ್ನು ಹೊರಪಡಿಸುವದಕ್ಕೋಸ್ಕರ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರನ್ನು ನಾಶಮಾಡದೆ ಹೋದದ್ದಕ್ಕೆ ಈಗ ಅವರು ಮಾಡುತ್ತಿರುವುದನ್ನು ನೀನೇ ನೋಡು. ನೀನು ನಮಗೆ ಕೊಟ್ಟ ದೇಶದಿಂದ ನಮ್ಮನ್ನು ಹೊರಡಿಸಲು ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಬಂದು, ನೀವು ನಮಗೆ ಸ್ವಾಧೀನಮಾಡಿಕೊಳ್ಳಲು ಕೊಟ್ಟ ನಿಮ್ಮ ಸ್ವಾಸ್ತ್ಯದೊಳಗಿಂದ ನಮ್ಮನ್ನು ಹೊರಡಿಸುವುದರಿಂದ ನಮಗೆ ಪ್ರತೀಕಾರ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:11
12 ತಿಳಿವುಗಳ ಹೋಲಿಕೆ  

ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.


ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು.


ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.


ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ;


ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, “ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.


ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.


ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು