Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರು ಉತ್ಸಾಹಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಸರ್ವೇಶ್ವರ ಯೆಹೂದ್ಯರಿಗೆ ವಿರುದ್ಧ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್‍ಪರ್ವತದವರನ್ನೂ ನಶಿಸುವುದಕ್ಕಾಗಿ ಅವರಲ್ಲಿ ಹೊಂಚುಹಾಕುವವರನ್ನು ಇರಿಸಿದ್ದರು. ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್‍ಪರ್ವತದವರ ಮೇಲೆ ಬಿದ್ದು ಅವರನ್ನು ಪೂರ್ಣವಾಗಿ ಸಂಹರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವದಕ್ಕೆ ಪ್ರಾರಂಭಿಸಲು ಯೆಹೋವನು ಯೆಹೂದ್ಯರಿಗೆ ವಿರೋಧವಾಗಿ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತದವರನ್ನೂ ನಶಿಸುವದಕ್ಕೋಸ್ಕರ ಅವರಲ್ಲಿ ಹೊಂಚುಹಾಕುವವರನ್ನು ಇರಿಸಿದ್ದರಿಂದ ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಪೂರ್ಣವಾಗಿ ಸಂಹರಿಸಿಬಿಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವರು ಹೀಗೆ ಸ್ತೋತ್ರ ಮಾಡುತ್ತಿರುವಾಗ ಅಮ್ಮೋನಿಯರ ಮೇಲೆಯೂ ಮೋವಾಬ್ಯರ ಮೇಲೆಯೂ ಸೇಯೀರ್ ಬೆಟ್ಟಪ್ರದೇಶದವರ ಮೇಲೆಯೂ ಇತರ ವೈರಿಗಳು ಹಠಾತ್ತನೆ ದಾಳಿ ಮಾಡುವಂತೆ ಯೆಹೋವನು ಮಾಡಿದನು. ಯೆಹೂದವನ್ನು ಆಕ್ರಮಣಮಾಡಲು ಬಂದಿದ್ದ ಅವರೆಲ್ಲರೂ ಸೋತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು ಹಾಡುವುದಕ್ಕೂ, ಸ್ತುತಿಸುವುದಕ್ಕೂ ಆರಂಭಿಸಿದಾಗಲೇ ಯೆಹೋವ ದೇವರು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯೀರ್ ಪರ್ವತಗಳ ಜನರನ್ನು ಸೋಲಿಸುವುದಕ್ಕೆ ಅವರಲ್ಲಿಯೇ ಹೊಂಚಿಕೊಳ್ಳುವವರನ್ನು ಇರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:22
15 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು.


ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು. ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದರು.


“ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.


“ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ” ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು.


ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.


ಈ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ ಸೇಯೀರ್ ಪರ್ವತ ಪ್ರದೇಶದವರನ್ನೂ ನೋಡು, ಇಸ್ರಾಯೇಲರು ಐಗುಪ್ತ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲಾ.


ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚು ಹಾಕುವುದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವರು ಅವರ ಹಿಂದೆಯೂ ಇದ್ದರು.


ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು.


ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.


ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ, “ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.


ಯೆಹೋವನು ಸ್ತೋತ್ರಕ್ಕೆ ಅರ್ಹನು. ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.


ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ಯೆಹೋವನಾದ ದೇವರು ಯಾರೊಬ್ಬಾಮನನ್ನೂ, ಎಲ್ಲಾ ಇಸ್ರಾಯೇಲರನ್ನೂ ಅಬೀಯನಿಂದಲೂ ಹಾಗೂ ಯೆಹೂದ್ಯರಿಂದಲೂ ಅಪಜಯಗೊಳಿಸಿದನು.


ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು