Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೋವನು ತಾನೇ ಇಸ್ರಾಯೇಲರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸರ್ವೇಶ್ವರಾ ಸ್ವಾಮಿಯೇ ಇಸ್ರಯೇಲರ ಪರವಾಗಿ ಶತ್ರಗಳೊಡನೆ ಯುದ್ಧಮಾಡಿದರೆಂಬ ಸುದ್ದಿ ಅನ್ಯದೇಶಗಳ ರಾಜ್ಯಗಳವರೆಗೆ ಮುಟ್ಟಿದಾಗ, ಅವರೆಲ್ಲರು ಬಹಳ ಭಯಭೀತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋವನು ತಾನೇ ಇಸ್ರಾಯೇಲ್ಯರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೋವನು ಇಸ್ರೇಲರ ವೈರಿಗಳಿಗೆ ವಿರುದ್ಧವಾಗಿ ಯುದ್ಧ ಮಾಡಿದನೆಂದು ಕೇಳಿ ಎಲ್ಲಾ ದೇಶಗಳವರು ಆತನಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೋವ ದೇವರು ಇಸ್ರಾಯೇಲರ ಶತ್ರುಗಳ ಮೇಲೆ ಯುದ್ಧ ಮಾಡಿದರೆಂದು ಜನರು ಕೇಳಿದಾಗ, ದೇವರ ಭಯವು ಆ ದೇಶದಲ್ಲಿ ಸಕಲ ರಾಜ್ಯಗಳ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:29
14 ತಿಳಿವುಗಳ ಹೋಲಿಕೆ  

ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರೆಗೆ ಯೆಹೋವನ ಭಯವಿದ್ದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.


ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,


ಇದಲ್ಲದೆ ಯೆಹೋವನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಿಂದ ಅವರಿಗೆ ದೊಡ್ಡ ಕೊಳ್ಳೆ ಸಿಕ್ಕಿತು.


ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.


ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.


ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ” ಎಂದು ಹೇಳಿದನು.


ಅವರು ಸ್ವರಮಂಡಲ, ಕಿನ್ನರಿ, ತುತ್ತೂರಿ, ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.


ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,


ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಹೇಳಿಕೊಂಡರು.


ಕೂಷ್ಯರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ನುಚ್ಚು ನೂರಾಗಿ ಹೋದರು. ಇಸ್ರಾಯೇಲರಿಗೆ ಅಪರಿಮಿತವಾದ ಕೊಳ್ಳೆ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು