Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆ ಇಸ್ರಯೇಲ್ ರಾಜರ ಗ್ರಂಥದಲ್ಲಿ ಹನಾನೀಯನ ಮಗ ಯೇಹುವಿನ ವೃತ್ತಾಂತದಲ್ಲಿ ದಾಖಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೆಹೋಷಾಫಾಟನು ಆರಂಭದಿಂದ ಕೊನೆಯವರೆಗೂ ಮಾಡಿದ ಬೇರೆ ಕಾರ್ಯಗಳು, ಹನಾನೀಯನ ಮಗನಾದ ಯೇಹು ಬರೆದ ಇಸ್ರೇಲ್ ರಾಜರ ಗ್ರಂಥದಲ್ಲಿ ದಾಖಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೆಹೋಷಾಫಾಟನ ಇತರ ಕ್ರಿಯೆಗಳು, ಆರಂಭದಿಂದ ಅಂತ್ಯದವರೆಗೆ, ಇಸ್ರಾಯೇಲರ ಅರಸುಗಳ ಗ್ರಂಥದಲ್ಲಿ, ಅಂದರೆ, ಹನಾನೀಯ ಮಗನಾದ ಯೇಹುವಿನ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:34
11 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ಆಗ ಯೆಹೋವನು ಹನಾನೀಯನ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೆ ಹೇಳಿದ್ದೇನೆಂದರೆ,


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು.


ಆಸನ ಪೂರ್ವೋತ್ತರಚರಿತ್ರೆಗಳನ್ನು ಯೆಹೂದ ಮತ್ತು ಇಸ್ರಾಯೇಲ್ ರಾಜರ ಇತಿಹಾಸ ಗ್ರಂಥಗಳಲ್ಲಿ ಬರೆದಿರುತ್ತದೆ.


ಅಬೀಯನ ಉಳಿದ‍ ಚರಿತ್ರೆಯೂ ಅವನ ನಡೆನುಡಿಗಳೂ ಪ್ರವಾದಿಯಾದ ಇದ್ದೋವಿನ ಚರಿತ್ರೆ ಪುಸ್ತಕದಲ್ಲಿ ಬರೆದಿರುತ್ತವೆ.


ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಕನಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.


ಬಾಷನೂ ಹಾಗು ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದರು.


ಅವನ ಉಳಿದ ಚರಿತ್ರೆಯೂ ಅವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರವೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.


ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ಮತ್ತು ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.


ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.


ಅಮಚ್ಯನ ಉಳಿದ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಾಯೇಲರ ರಾಜರ ಗ್ರಂಥಗಳಲ್ಲಿ ಬರೆಯಲ್ಪಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು