Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಯೆಹೂದ್ಯರು ಸರ್ವೇಶ್ವರನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದದ ಜನರೆಲ್ಲಾ ಯೆಹೋವನನ್ನು ವಿಚಾರಿಸಲು ಒಟ್ಟಾಗಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಯೆಹೂದದವರು ಯೆಹೋವ ದೇವರಿಂದ ಸಹಾಯವನ್ನು ಕೇಳಿಕೊಳ್ಳಲು ಸಮಸ್ತ ಯೆಹೂದದ ಪಟ್ಟಣಗಳಿಂದ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:4
13 ತಿಳಿವುಗಳ ಹೋಲಿಕೆ  

ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು.


ಅವನು ಯೆಹೂದ ದೇಶದ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.


ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದು ಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,


ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.


ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ, ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ, ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ.


ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.


ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.


ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.


ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು?


ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು