Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋಷಾಫಾಟನು ಪೂರ್ವಿಕರ ಬಳಿಗೆ ಸೇರಿದನು. ದಾವೀದನಗರದಲ್ಲಿ ಅವನನ್ನು ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದ ಮೇಲೆ, ಅವನ ಮಗನಾದ ಯೆಹೋರಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೆಹೋಷಾಫಾಟನು ಮೃತನಾಗಿ ಪಿತೃಗಳ ಬಳಿಗೆ ಸೇರಿ ದಾವೀದನಗರದಲ್ಲಿದ್ದ ಪೂರ್ವಿಕರ ಸ್ಮಶಾನಭೂಮಿಯಲ್ಲಿ ಸಮಾಧಿಹೊಂದಿದ ಮೇಲೆ, ಅವನ ಸ್ಥಾನದಲ್ಲಿ ಅವನ ಮಗ ಯೆಹೋರಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋಷಾಫಾಟನು ಪಿತೃಗಳ ಬಳಿಗೆ ಸೇರಿ ದಾವೀದನಗರದಲ್ಲಿ ಪೂರ್ವಿಕರ ಶ್ಮಶಾನಭೂವಿುಯಲ್ಲಿ ಸಮಾಧಿಹೊಂದಿದ ಮೇಲೆ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋಷಾಫಾಟನು ಸತ್ತನು. ಅವನನ್ನು ಅವನ ಪೂರ್ವಿಕರೊಂದಿಗೆ ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಮಗನಾದ ಯೆಹೋರಾಮನು ಪಟ್ಟಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋಷಾಫಾಟನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಪೂರ್ವಜರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಆಗ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:1
8 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋರಾಮನು ಅರಸನಾದನು.


ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ರಾಜ್ಯಭಾರಮಾಡಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ. ಅವನು ಯಾರಿಗೂ ಇಷ್ಟವಿಲ್ಲದವನಾಗಿ ಗತಿಸಿಹೋದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜರ ಸಮಾಧಿಗಳಲ್ಲಿ ಅವನನ್ನು ಸಮಾಧಿಮಾಡಲಿಲ್ಲ.


ರೆಹಬ್ಬಾಮನು ತನ್ನ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಲಾಯಿತು. ಅವನ ಮಗನಾದ ಅಬೀಯನು ಅವನ ನಂತರ ಅರಸನಾದನು.


ಆನಂತರ ಸೊಲೊಮೋನನು ತನ್ನ ಪೂರ್ವಿಕರ ಬಳಿಗೆ ಸೇರಿದನು, ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.


ಯೆಹೋರಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ಅರಸನಾದನು.


ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, “ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು” ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.


ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು