Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಫಿಲಿಷ್ಟಿಯರನ್ನೂ, ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಫಿಲಿಷ್ಟಿಯರನ್ನೂ ಸುಡಾನಿನ ನೆರೆಯವರಾದ ಅರೇಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಫಿಲಿಷ್ಟಿಯರನ್ನೂ ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಎಬ್ಬಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಫಿಲಿಷ್ಟಿಯರೂ ಇಥಿಯೋಪಿಯದವರ ಬಳಿಯಲ್ಲಿ ವಾಸವಾಗಿದ್ದ ಅರಬಿಯರೂ ಯೆಹೋರಾಮನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಕೂಷ್ಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಯೆಹೋವ ದೇವರು ಎಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:16
16 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ, ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು.


ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.


ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬುವನು.


ಯೆಹೋವನು ಎದೋಮ್ಯನೂ, ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧವಾಗಿ ಎಬ್ಬಿಸಿದನು.


ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?


ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.


ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.


ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.


ಯೆಹೋವನು ಅವನಿಗೆ, “ನೀನು ಈ ರೀತಿಯಾಗಿ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.


ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.


ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.


ನನ್ನ ಬೆಳ್ಳಿ ಬಂಗಾರಗಳನ್ನು ದೋಚಿಕೊಂಡು, ನನ್ನ ಅಮೂಲ್ಯವಾದ ವಸ್ತ್ರಗಳನ್ನು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.


ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು