Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೂ ಯೆಹೋವನು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ” ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೂ ಸರ್ವೇಶ್ವರ ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿ ಹೇಳಿದ್ದರಿಂದ ಆ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೂ ಯೆಹೋವನು ದಾವೀದನಿಗೆ - ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವದಿಲ್ಲ ಎಂದು ಪ್ರಮಾಣಮಾಡಿ ಹೇಳಿದ್ದದರಿಂದ ದಾವೀದನ ಮನೆತನದವರನ್ನು ನಾಶಮಾಡುವದಕ್ಕೆ ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಯೆಹೋವನು ದಾವೀದನೊಂದಿಗೆ ಮಾಡಿದ ಒಡಂಬಡಿಕೆಯ ನಿಮಿತ್ತ ಅವನನ್ನು ನಾಶಮಾಡಲಿಲ್ಲ. ಯೆಹೋವನು, “ದಾವೀದನ ಸಂತತಿಯವರ ಬೆಳಕು ಉರಿಯುತ್ತಲೇ ಇರುವದು” ಎಂದು ವಾಗ್ದಾನ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:7
19 ತಿಳಿವುಗಳ ಹೋಲಿಕೆ  

ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”


ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.


ಆದರೆ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು” ಎಂದು ಹೇಳಿದನು.


ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;


ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ.


ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.


ಆದರೂ, ಯೆಹೋವನು ಯೆಹೂದ ರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ ಎಂಬುದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ಸ್ಮರಿಸಿ ಅದನ್ನು ಉಳಿಸಿದನು.


ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?


ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.


ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಆರಿಸಲಿಲ್ಲ.


ಯೆಹೋರಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ಅರಸನಾದನು.


ಹೀಗೆ ಕೂಡಿ ಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಅರಸನಾಗತಕ್ಕವನು ಇವನೇ.


ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನಡೆದುಕೊಳ್ಳುವುದಾದರೆ ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂಬುದಾಗಿ ವಾಗ್ದಾನ ಮಾಡಿರುವೆಯಲ್ಲಾ, ಅದನ್ನು ನೆರವೇರಿಸು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು