Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 22:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರ ಪ್ರೇರಣೆಯಿಂದಲೇ ಅವನು ಇಸ್ರಾಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ, ರಾಮೋತ್ ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಪ್ರೇರಣೆಯಿಂದಲೇ ಇಸ್ರಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಸಿರಿಯಾದ ಅರಸ ಹಜಾಯೇಲನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ರಾಮೋತ್‍ಗಿಲ್ಯಾದಿಗೆ ಹೋದನು. ಸಿರಿಯಾದವರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರ ಪ್ರೇರಣೆಯಿಂದ ಇಸ್ರಾಯೇಲ್ಯರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವದಕ್ಕೆ ರಾಮೋತ್‍ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಲು ಅವನು ಆ ಗಾಯಗಳನ್ನು ಮಾಯಿಸಿಕೊಳ್ಳುವದಕ್ಕಾಗಿ ಇಜ್ರೇಲಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಹಾಬನ ಕುಟುಂಬದವರ ಸಲಹೆಯ ಮೇರೆಗೆ ಅಹಜ್ಯನು ರಾಜನಾದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನೊಂದಿಗೆ ಯುದ್ಧಮಾಡಲು ರಾಮೋತ್‌ಗಿಲ್ಯಾದ್ ಎಂಬ ಪಟ್ಟಣಕ್ಕೆ ಹೋದನು. ಯೋರಾಮನು ಇಸ್ರೇಲರ ಅರಸನಾದ ಅಹಾಬನ ಮಗನು. ಅರಾಮ್ಯರು ಯುದ್ಧದಲ್ಲಿ ಯೋರಾಮನನ್ನು ಗಾಯಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಹಜ್ಯನು ಇವರ ಯೋಚನೆಯ ಪ್ರಕಾರ ನಡೆದು, ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ಯೋರಾಮನ ಸಂಗಡ ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 22:5
13 ತಿಳಿವುಗಳ ಹೋಲಿಕೆ  

ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”


“ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ.


ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,


ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.


ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು” ಎಂದು ಉತ್ತರ ಕೊಟ್ಟನು.


ಹಜಾಯೇಲನು ದಮಸ್ಕದ ಶ್ರೇಷ್ಠ ವಸ್ತುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ, ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ” ಎಂದು ಹೇಳಿದನು.


ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತುಕೊಂಡಿರುತ್ತೇವೆ” ಎಂದು ಹೇಳಿದನು.


ರಾಮೋತ್ ಗಿಲ್ಯಾದಿನಲ್ಲಿದ್ದ ಗೆಬೇರನ ಮಗ, ಅವನು ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದನು.


ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.


ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರ್ಷ ಆಳಿದನು.


ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು