Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಯುಧಪಾಣಿಗಳಾದ ಎಲ್ಲಾ ಜನರನ್ನು ಅರಸನ ಸುತ್ತಲೂ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯ ವರೆಗೂ ಸಾಲಾಗಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಯುಧಪಾಣಿಗಳಾದ ಎಲ್ಲ ಜನರನ್ನು ಅರಸನ ಸುತ್ತಲು ದೇವಾಲಯದ ದಕ್ಷಿಣದಿಕ್ಕಿನ ಮೂಲೆಯಿಂದ ಬಲಿಪೀಠದವರೆಗೂ ಅಲ್ಲಿಂದ ಉತ್ತರದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಯುಧಪಾಣಿಗಳಾದ ಎಲ್ಲಾ ಜನರನ್ನು ಅರಸನ ಸುತ್ತಲೂ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ ಅಲ್ಲಿಂದ ಉತ್ತರದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೇರಿಬಂದವರು ಎಲ್ಲೆಲ್ಲಿ ನಿಲ್ಲಬೇಕೆಂದು ಯೆಹೋಯಾದನು ಸೂಚಿಸಿದನು. ಪ್ರತಿಯೊಬ್ಬರ ಕೈಯಲ್ಲಿ ಆಯುಧಗಳಿದ್ದವು. ದೇವಾಲಯದ ಎಡಬಲಗಳಲ್ಲಿ ಜನರು ನಿಂತಿದ್ದರು. ಯಜ್ಞವೇದಿಕೆಯ ಬಳಿ, ದೇವಾಲಯದ ಬಳಿ ಮತ್ತು ಅರಸನ ಬಳಿಯಲ್ಲಿ ಅವರು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡಿದ್ದ ಸಮಸ್ತ ಜನರನ್ನೂ ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:10
6 ತಿಳಿವುಗಳ ಹೋಲಿಕೆ  

ಸೊಲೊಮೋನನು ಎಲ್ಲಾ ಇಸ್ರಾಯೇಲರ ಸಮ್ಮುಖದಲ್ಲಿ ಯೆಹೋವನ ಯಜ್ಞವೇದಿಯ ಎದುರು ತನ್ನ ಕೈಗಳನ್ನೆತ್ತಿ ಪ್ರಾರ್ಥನಾ ಭಂಗಿಯಲ್ಲಿ ನಿಂತನು.


ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕೋಸ್ಕರ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಂತರು.


ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇರಿಸಬೇಕು.


ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.


ಆಮೇಲೆ ಯೆಹೋಯಾದನ ಮಕ್ಕಳು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ಅಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.


ನೂಕುನುಗ್ಗಲ್ಲಿಲ್ಲದೆ ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ; ಆಯುಧಗಳ ನಡುವೆ ನುಗ್ಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು