Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಸರ್ವೇಶ್ವರನ ಆಲಯದಲ್ಲಿ ನಡೆವ ಆರಾಧನೆಗೆ ಹಾಗು ಬಲಿಯರ್ಪಣೆಗೆ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ, ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಆಲಯದಲ್ಲಿ ಪ್ರತಿನಿತ್ಯವೂ ದಹನಬಲಿ ಸಮರ್ಪಣೆ ಆಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೆಲಸ ತೀರಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ ಯಜ್ಞಾರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮ ಸಮರ್ಪಣೆಯಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕೆಲಸ ಮುಗಿಸಿದ ಮೇಲೆ, ಮಿಕ್ಕ ಅರಸನ ಮುಂದೆಯೂ ಯೆಹೋಯಾದಾವನ ಮುಂದೆಯೂ ತಂದರು. ಅದರಿಂದ ಯೆಹೋವ ದೇವರ ಆಲಯಕ್ಕೋಸ್ಕರ ಬಂಗಾರ ಬೆಳ್ಳಿ ಪಾತ್ರೆಗಳಾದ ಸೇವೆಯ ಪಾತ್ರೆಗಳು, ಅರ್ಪಣೆಯ ಪಾತ್ರೆಗಳು, ಸೌಟುಗಳು ಮಾಡಲಾಗಿದ್ದವು. ಯೆಹೋಯಾದಾವನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಯೆಹೋವ ದೇವರ ಆಲಯದಲ್ಲಿ ದಹನಬಲಿಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:14
13 ತಿಳಿವುಗಳ ಹೋಲಿಕೆ  

ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗದು.


ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ


ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ, “ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾಗಿರುವುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ ಎಂದು” ಹೇಳಿದರು.


ಕೆಲಸ ಮಾಡುವವರು ಆಸಕ್ತಿಯಿಂದ ಜೀರ್ಣೋದ್ಧಾರದ ಕೆಲಸವನ್ನು ಮಾಡಿ ಮುಗಿಸಿದರು. ಹೀಗೆ ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.


ಯೆಹೋಯಾದನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರ್ಷದವನಾಗಿದ್ದನು.


ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.


ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಕೆ, ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.


ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ.


ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು