Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ,ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಅವರು ಜೆಕರ್ಯನ ವಿರೋಧವಾಗಿ ಒಳಸಂಚು ಮಾಡಿದರು. ಅವನನ್ನು ಕೊಲ್ಲಲು ಅರಸನು ಅವರಿಗೆ ಆಜ್ಞಾಪಿಸಿದನು. ಆಗ ಅವರು ಅವನನ್ನು ದೇವಾಲಯದ ಅಂಗಳದಲ್ಲಿಯೇ ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಯೆಹೋವ ದೇವರ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:21
16 ತಿಳಿವುಗಳ ಹೋಲಿಕೆ  

ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.


ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.


ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.


“ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.


ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.


ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.


ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.


ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು