Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಹಹ! ಎದೋಮ್ಯರನ್ನು ಸೋಲಿಸಿ ಬಹಳ ಕೀರ್ತಿಯನ್ನು ಪಡಕೊಂಡೆ, ಎಂದು ನೀನು ಹೆಮ್ಮೆಪಡುತಿರುವೆ; ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೇ? ನನ್ನನ್ನು ಕೆಣಕಿ ನಿನಗೂ ನಿನ್ನ ಯೆಹೂದ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಹಹ! ಎದೋಮ್ಯರನ್ನು ಸೋಲಿಸಿ ಬಹುಕೀರ್ತಿ ಪಡೆದುಕೊಂಡೆ ಎಂದು ನೀನು ಹೆಮ್ಮೆಗೊಂಡಿರುವೆ! ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೆ? ನನ್ನನ್ನು ಕೆಣಕಿ ನಿನಗೂ ನಿನ್ನ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಹಹ, ಎದೋಮ್ಯರನ್ನು ಸೋಲಿಸಿ ಬಹುಕೀರ್ತಿಯನ್ನು ಪಡಕೊಂಡೆನಲ್ಲಾ ಎಂದು ನೀನು ಹೆಮ್ಮೆಗೊಂಡಿದ್ದೀ; ಸುಮ್ಮನೆ ಮನೆಯಲ್ಲಿ ಕೂತುಕೊಳ್ಳಬಾರದೇ; ನನ್ನನ್ನು ಕೆಣಕಿ ನಿನಗೂ ನಿನ್ನ ರಾಜ್ಯಕ್ಕೂ ಯಾಕೆ ಕೇಡನ್ನು ತಂದುಕೊಳ್ಳುತ್ತೀ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಎದೋಮನನ್ನು ಸೋಲಿಸಿದ್ದೇನೆ’ ಎಂದು ನೆನಸಿಕೊಂಡಿರಬಹುದು. ನೀನು ತುಂಬಾ ಹೆಮ್ಮೆಯುಳ್ಳವನಾಗಿ ಜಂಬ ಕೊಚ್ಚಿಕೊಳ್ಳುತ್ತಿರುವೆ. ಆದರೆ ನೀನು ಮನೆಯಲ್ಲಿಯೇ ಕುಳಿತುಕೊಳ್ಳುವುದು ಒಳ್ಳೆದು. ಸುಮ್ಮನೆ ತೊಂದರೆಗೆ ಸಿಕ್ಕಿಕೊಳ್ಳಬೇಡ. ನನ್ನೊಂದಿಗೆ ಯುದ್ಧ ಮಾಡಿದರೆ ಇಡೀ ಯೆಹೂದ ದೇಶವೇ ನಾಶವಾಗುವದು.” ಎಂದು ಬರೆದು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀನು ಎದೋಮ್ಯರನ್ನು ಸೋಲಿಸಿ ಕೀರ್ತಿಯನ್ನು ಪಡೆದುಕೊಂಡೆನಲ್ಲಾ ಎಂದು ನಿನ್ನ ಹೃದಯವು ಗರ್ವಪಡದಿರಲಿ. ಈಗ ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:19
19 ತಿಳಿವುಗಳ ಹೋಲಿಕೆ  

ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.


ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.


ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ?


ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.


ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.


ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.


ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, ನಾಯಿಯ ಕಿವಿಹಿಡಿದ ಹಾಗೆ.


ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.


ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.


ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.


ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ಯೋಷೀಯನು ಅವನಿಗೆ ವಿರುದ್ಧವಾಗಿ ಹೊರಡಲು ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ, “ಯೆಹೂದದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟದ್ದು ನಿನಗೆ ವಿರುದ್ಧವಾಗಿ ಅಲ್ಲ. ನನ್ನ ಶತ್ರುವಂಶಕ್ಕೆ ವಿರುದ್ಧವಾಗಿ, ನಾನು ಮುನ್ನುಗ್ಗಬೇಕೆಂದು ದೇವರ ಅಪ್ಪಣೆಯಾಗಿದೆ. ನನ್ನೊಂದಿಗಿರುವ ದೇವರಿಗೆ ವಿರುದ್ಧ ಕೈಯೆತ್ತುವುದನ್ನು ಬಿಡು. ಇಲ್ಲವಾದರೆ ಆತನು ನಿನ್ನನ್ನು ನಾಶಮಾಡುವನು” ಎಂದು ಹೇಳಿಸಿದನು.


ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.


ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಅದು ದೇವರ ಸಂಕಲ್ಪದಿಂದಲೇ ಆಯಿತು. ಯೆಹೂದ್ಯರು ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಅಪಜಯ ಮಾಡಬೇಕೆಂದು ಯೆಹೋವನು ನಿರ್ಣಯಿಸಿದ್ದನು.


ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು