Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದದ ಅರಸನೂ, ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಹಾಕಿದ್ದಲ್ಲದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇಸ್ರಯೇಲರ ಅರಸ ಯೋವಾಷನು, ಯೆಹೋವಹಾಜನ ಮೊಮ್ಮಗನೂ ಯೆಹೋವಾಷನ ಮಗನೂ ಜುದೇಯದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆಹಿಡಿದನು. ಅವನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದು, ಎಫ್ರಯಿಮ್ ಬಾಗಿಲಿಗೂ ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಜೆರುಸಲೇಮಿನ ಗೋಡೆಯನ್ನು ಸುಮಾರು ಇನ್ನೂರು ಮೀಟರಿನಷ್ಟು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇವಿುಗೆ ಕರಕೊಂಡು ಬಂದು ಎಫ್ರಾಯೀಮ್ ಬಾಗಲಿಗೂ ಮೂಲೆಯ ಬಾಗಲಿಗೂ ಮಧ್ಯದಲ್ಲಿದ್ದ ಯೆರೂಸಲೇವಿುನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೋವಾಷನು ಬೇತ್ಷೆಮೆಷಿನಲ್ಲಿ ಅಮಚ್ಯನನ್ನು ಹಿಡಿದು ಜೆರುಸಲೇಮಿಗೆ ಕೊಂಡೊಯ್ದನು. ಅಮಚ್ಯನ ತಂದೆ ಯೆಹೋವಾಷನು. ಇವನು ಯೆಹೋವಹಾಜನ ಮಗ. ಯೋವಾಷನು ಜೆರುಸಲೇಮಿನ ಪೌಳಿಗೋಡೆಯಲ್ಲಿ ಆರುನೂರು ಅಡಿ ಗೋಡೆಯನ್ನು ಅಂದರೆ ಎಫ್ರಾಯೀಮ್ ಬಾಗಿಲಿನಿಂದ ಹಿಡಿದು ಮೂಲೆಬಾಗಿಲಿನವರೆಗೆ ಗೋಡೆಯನ್ನು ಕೆಡವಿಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಊರಿನ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು, ಮೂಲೆಯ ಬಾಗಿಲವರೆಗೂ, 180 ಮೀಟರ್ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:23
18 ತಿಳಿವುಗಳ ಹೋಲಿಕೆ  

ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳ, ಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಿಲು, ಎಫ್ರಾಯೀಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.


ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ, ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ.


ಯೆಹೋವನು, “ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವುದು.


ಅಲ್ಲಿಂದ ಎಫ್ರಾಯೀಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಗೋಪುರ, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿ ಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.


ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು.


ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.


ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.


ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,


ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.


ಇಸ್ರಾಯೇಲರ ಅರಸನಾದ ಯೋವಾಷನೂ, ಅಹಜ್ಯನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಇಸ್ರಾಯೇಲರ ಅರಸನಾದ ಯೆಹೋವಾಷನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೂ ಇದ್ದ ಯೆರೂಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿ ಬಿಟ್ಟನು.


ಯೆಹೂದ್ಯರು ಇಸ್ರಾಯೇಲ್ಯರಿಗೆ ಸೋತು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು