Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನೇ ಹೋಗಿ ಆ ಕಾರ್ಯವನ್ನು ನಿರ್ವಹಿಸು; ಧೈರ್ಯದಿಂದ ಯುದ್ಧಮಾಡು. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನೀನು ಅಪಜಯಹೊಂದುವಂತೆ ಮಾಡುವನು, ಜಯಾ, ಅಪಜಯಗಳನ್ನು ಉಂಟುಮಾಡುವುದಕ್ಕೆ ಆತನು ಶಕ್ತನಾಗಿರುತ್ತಾನಲ್ಲವೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀವೇ ಹೋಗಿ ಕಾರ್ಯವನ್ನು ನಿರ್ವಹಿಸಿರಿ. ಧೈರ್ಯದಿಂದ ಯುದ್ಧಮಾಡಿ. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನಿಮ್ಮನ್ನು ಅಪಜಯಗೊಳಿಸುವರು. ಜಯಾಪಜಯಗಳನ್ನು ನೀಡಲು ಅವರು ಶಕ್ತರು ಆಗಿರುತ್ತಾರಲ್ಲವೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀನೇ ಹೋಗಿ ಕಾರ್ಯವನ್ನು ನಡಿಸು; ಧೈರ್ಯದಿಂದ ಯುದ್ಧಮಾಡು. [ಹಾಗೆ ಮಾಡದಿದ್ದರೆ] ದೇವರು ಶತ್ರುಗಳಿಂದ ನಿನ್ನನ್ನು ಅಪಜಯಪಡಿಸುವನು. ಜಯಾಪಜಯಗಳನ್ನುಂಟುಮಾಡುವದಕ್ಕೆ ಆತನು ಶಕ್ತನಾಗಿರುತ್ತಾನಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ನಿನ್ನನ್ನು ಬಲಿಷ್ಠನನ್ನಾಗಿ ಮಾಡಿಕೊಂಡಿದ್ದರೂ ನಿನ್ನ ಸೋಲು ಮತ್ತು ನಿನ್ನ ಜಯ ದೇವರ ಕೈಯಲ್ಲಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ಹೋಗಿ ಯುದ್ಧದಲ್ಲಿ ಧೈರ್ಯದಿಂದ ಹೋರಾಡಿದರೂ ದೇವರು ಶತ್ರುವಿನ ಮುಂದೆ ನಿನ್ನನ್ನು ಸೋಲಿಸಿಬಿಡುವರು. ಏಕೆಂದರೆ ಸಹಾಯ ಕೊಡುವುದಕ್ಕೂ, ಬೀಳ ಮಾಡುವುದಕ್ಕೂ ದೇವರಿಗೆ ಶಕ್ತಿ ಉಂಟು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:8
25 ತಿಳಿವುಗಳ ಹೋಲಿಕೆ  

ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.


“ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.


‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.


ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.


ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.


ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವುದಿಲ್ಲ; ರಾಹಾಬನ ಸಹಾಯಕರು ಆತನಿಗೆ ಅಡ್ಡಬಿದ್ದರಲ್ಲಾ.


ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.


ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ? ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ? ಹೋಗಬಾರದೋ? ಎಂದು ಕೇಳಿದನು. ಅವನು, ಹೋಗಬಹುದು, ಕೃತಾರ್ಥನಾಗಿ ಬರುವಿರಿ, ವೈರಿಗಳು ನಿನ್ನ ಕೈವಶವಾಗುವರು” ಎಂದು ಹೇಳಿದನು.


ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.


ಆಗ ಯೆಹೋವನು ಗಿದ್ಯೋನನಿಗೆ, “ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ” ಎಂದು ಆಜ್ಞಾಪಿಸಿದನು.


ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.


ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, “ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.


ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.


ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು