2 ಪೂರ್ವಕಾಲ ವೃತ್ತಾಂತ 26:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇದಲ್ಲದೆ, ಅವನು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವುದಕ್ಕಾಗಿ, ತಜ್ಞರ ಕಲ್ಪನೆಯ ಮೇರೆಗೆ ಯಂತ್ರಗಳನ್ನು ಮಾಡಿಸಿ, ಅವುಗಳನ್ನು ಜೆರುಸಲೇಮಿನ ಬುರುಜುಗಳ ಮೇಲೆಯೂ ಆಳುವೇರಿಗಳ ಮೇಲೆಯೂ ಇಡಿಸಿದ್ದನು. ಬಲಿಷ್ಠನಾಗುವವರೆಗೂ ಅವನ ದೇವರ ಸಹಾಯವನ್ನು ಆಶ್ಚರ್ಯಕರವಾದ ರೀತಿಯಲ್ಲಿ ಪಡೆಯುತ್ತಿದ್ದನು; ಅವನ ಕೀರ್ತಿ ಬಲು ದೂರದವರೆಗೆ ಹಬ್ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇದಲ್ಲದೆ ಅವನು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವದಕ್ಕಾಗಿ ಜಾಣರ ಕಲ್ಪನೆಯ ಮೇರೆಗೆ ಯಂತ್ರಗಳನ್ನು ಮಾಡಿಸಿ ಅವುಗಳನ್ನು ಯೆರೂಸಲೇವಿುನಲ್ಲಿ ಬುರುಜುಗಳ ಮೇಲೆಯೂ ಆಳುವೇರಿಗಳ ಮೇಲೆಯೂ ಇಡಿಸಿದನು. ಅವನು ಬಲಿಷ್ಠನಾಗುವವರೆಗೂ ದೇವರ ಆಶ್ಚರ್ಯವಾದ ಸಹಾಯವನ್ನು ಹೊಂದಿದನು; ಅವನ ಕೀರ್ತಿಯು ದೂರದವರೆಗೆ ಹಬ್ಬಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಜೆರುಸಲೇಮಿನಲ್ಲಿ ವಿಜ್ಞಾನಿಗಳು ರೂಪಿಸಿದ ಯಂತ್ರಗಳನ್ನು ಉಜ್ಜೀಯನು ತಯಾರಿಸಿದನು. ಇವುಗಳನ್ನು ಪೌಳಿಗೋಡೆಯ ಮೇಲೆ ಇರಿಸಿದನು. ಇವು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ವೈರಿಗಳ ಮೇಲೆ ಹಾರಿಸಬಲ್ಲವಾಗಿದ್ದವು. ಉಜ್ಜೀಯನು ತುಂಬಾ ಪ್ರಸಿದ್ಧಿ ಹೊಂದಿದ್ದನು. ಬಹುದೂರದ ತನಕ ಅವನ ಹೆಸರು ಹಬ್ಬಿತು. ಅವನು ದೇವರ ವಿಶೇಷ ಸಹಾಯ ಪಡೆದುಕೊಂಡು ಬಲಿಷ್ಠನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ, ಮಣ್ಣುದಿಬ್ಬಗಳ ಮೇಲೆಯೂ ಇರಲು, ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದ್ದರಿಂದ ಅವನ ಹೆಸರು ಬಹಳ ದೂರದವರೆಗೆ ಪ್ರಸಿದ್ಧಿಯಾಯಿತು. ಬಹು ಬಲಿಷ್ಠನಾಗುವ ಪರ್ಯಂತರ ಅವನು ಬಹು ಆಶ್ಚರ್ಯಕರವಾಗಿ ಸಹಾಯ ಪಡೆಯುತ್ತಿದ್ದನು. ಅಧ್ಯಾಯವನ್ನು ನೋಡಿ |
ಅವನು ದಾನ್ ಕುಲದ ಸ್ತ್ರೀಯರಲ್ಲಿ ಒಬ್ಬಳ ಮಗನಾಗಿದ್ದಾನೆ. ಅವನ ತಂದೆ ತೂರಿನವನು. ಅವನು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ, ಕಡುಗೆಂಪುವರ್ಣ ನೀಲರಕ್ತವರ್ಣಗಳುಳ್ಳ ಅಮೂಲ್ಯರತ್ನಗಳನ್ನು ಕೆತ್ತುವುದಕ್ಕೂ, ನಯವಾದ ನಾರು ವಸ್ತ್ರಗಳನ್ನು ನೇಯುವುದಕ್ಕೂ, ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಕೆಲಸಗಳನ್ನು ನಡಿಸುವುದಕ್ಕೂ, ಎಲ್ಲಾ ತರದ ಕೆತ್ತನೆಯ ಕೆಲಸವನ್ನು ಮಾಡುವುದಕ್ಕೂ ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಚಮತ್ಕಾರವಾದ ಕೆಲಸಗಳನ್ನು ನಡಿಸುವುದಕ್ಕೂ ಸಮರ್ಥನು, ನೀನೂ ನಿನ್ನ ತಂದೆಯು, ನನ್ನ ಒಡೆಯನು ಆದ ದಾವೀದನೂ ಗೊತ್ತುಮಾಡಿದ ಕುಶಲಕರ್ಮಿಗಳೊಡನೆ ಅವನು ಕೆಲಸ ಮಾಡಲಿ
ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ.