Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಉಜ್ಜೀಯರೇ, ಸರ್ವೇಶ್ವರನಿಗೆ ಧೂಪಾರತಿ ಎತ್ತುವುದು ನಿಮ್ಮ ಕೆಲಸವಲ್ಲ; ಅದಕ್ಕೆ ಆರೋನನ ಸಂತಾನದವರ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟು ಹೋಗಿ; ನೀವು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಸರ್ವೇಶ್ವರನಿಂದ ನಿಮಗೆ ಮರ್ಯಾದೆ ದೊರಕಲಾರದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನಿಗೆ - ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ದ್ರೋಹಿ. ಇದಕ್ಕಾಗಿ ದೇವರಾದ ಯೆಹೋವನಿಂದ ನಿನಗೆ ಮಾನವುಂಟಾಗಲಾರದು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಉಜ್ಜೀಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋನನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಈ ಮಹಾ ಪವಿತ್ರಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಈ ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನನ್ನು ಎದುರಿಸಿ, “ಉಜ್ಜೀಯನೇ, ಯೆಹೋವ ದೇವರಿಗೆ ಧೂಪ ಸುಡುವುದು ಪ್ರತಿಷ್ಠಿತರಾದ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು. ನೀನು ಪರಿಶುದ್ಧ ಸ್ಥಳದಿಂದ ಹೊರಟು ಹೋಗು, ಅಪರಾಧ ಮಾಡಿದೆ. ದೇವರಾದ ಯೆಹೋವ ದೇವರಿಂದ ನಿನಗೆ ಗೌರವ ದೊರಕದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:18
22 ತಿಳಿವುಗಳ ಹೋಲಿಕೆ  

ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.


ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.


ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.


ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.


ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.


ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.


ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?


ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದು ಹೇಳಿದನು.


ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.


ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,


ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು