Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನ ಕಾಲದಲ್ಲಿ ಅವನು ದೇವರನ್ನು ಅವಲಂಬಿಸಿದ್ದ ಕಾಲಾವಧಿಯಲ್ಲೇ ದೇವರಾದ ಸರ್ವೇಶ್ವರ ಅವನನ್ನು ಅಭಿವೃದ್ಧಿಗೆ ತಂದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜೆಕರ್ಯನು ಜೀವಿಸುತ್ತಿದ್ದಾಗ ಉಜ್ಜೀಯನು ದೇವರನ್ನು ಅನುಸರಿಸಿದನು. ಅವನು ಉಜ್ಜೀಯನಿಗೆ ದೇವರಿಗೆ ಹೇಗೆ ಭಯಪಡಬೇಕು, ದೇವರನ್ನು ಹೇಗೆ ಗೌರವಿಸಬೇಕೆಂದು ಕಲಿಸಿಕೊಟ್ಟನು. ಉಜ್ಜೀಯನು ದೇವರಿಗೆ ವಿಧೇಯನಾಗಿ ಬಾಳಿದಾಗ ಯೆಹೋವ ದೇವರು ಅವನಿಗೆ ಯಶಸ್ಸನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾದ ಜೆಕರ್ಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಯೆಹೋವ ದೇವರನ್ನು ಹುಡುಕುವ ದಿವಸಗಳ ಮಟ್ಟಿಗೂ, ದೇವರು ಅವನನ್ನು ಅಭಿವೃದ್ಧಿ ಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:5
24 ತಿಳಿವುಗಳ ಹೋಲಿಕೆ  

ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ಯೆಹೋವಾಷ ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.


ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.


ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.


ಪಾರಸಿಯ ರಾಜನಾದ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು.


ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು,


ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.


ನೀನೇ ಹೋಗಿ ಆ ಕಾರ್ಯವನ್ನು ನಿರ್ವಹಿಸು; ಧೈರ್ಯದಿಂದ ಯುದ್ಧಮಾಡು. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನೀನು ಅಪಜಯಹೊಂದುವಂತೆ ಮಾಡುವನು, ಜಯಾ, ಅಪಜಯಗಳನ್ನು ಉಂಟುಮಾಡುವುದಕ್ಕೆ ಆತನು ಶಕ್ತನಾಗಿರುತ್ತಾನಲ್ಲವೆ?” ಎಂದನು.


ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.


ನನ್ನ ಮಗನೇ, ನೀನು ಸಫಲನಾಗಿರುವಂತೆಯೂ, ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.


ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಬದುಕಿದ್ದ, ಯೆಹೋವನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವನನ್ನು ಸೇವಿಸುತ್ತಿದ್ದರು.


ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು.


ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.


ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.


ಇವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.


ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.


ಯೋತಾಮನು ತನ್ನ ದೇವರಾದ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಂಡದ್ದರಿಂದ ಬಲವುಳ್ಳವನಾದನು.


ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.


ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.


ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದುದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.


ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.


ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು