Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ, ಹದ್ಲೈಯನ ಮಗನಾದ ಅಮಾಸ ಎಂಬುವವರು ಯುದ್ಧದಿಂದ ಬರುವವರ ಮುಂದೆ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಎಫ್ರಯಿಮರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯ, ಮೆಷಿಲ್ಲೇಮೋತನ ಮಗ ಬೆರೆಕ್ಯ, ಶಲ್ಲೂಮನ ಮಗ ಹಿಜ್ಕೀಯ, ಹದ್ಲೈಯನ ಮಗ ಅಮಾಸ ಎಂಬವರು ಯುದ್ಧದಿಂದ ಬರುತ್ತಿದ್ದವರ ಮುಂದೆ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರೆಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ, ಹದ್ಲೈಯನ ಮಗನಾದ ಅಮಾಸ ಎಂಬವರು ಯುದ್ಧದಿಂದ ಬರುವವರ ಮುಂದೆ ನಿಂತು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಇಸ್ರೇಲರ ಸೈನಿಕರು ತಮ್ಮ ಮನೆಗೆ ಯುದ್ಧದಿಂದ ಹಿಂತಿರುಗುವುದನ್ನು ಎಫ್ರಾಯೀಮಿನ ಕೆಲವು ನಾಯಕರು ನೋಡಿದರು. ಆ ನಾಯಕರು ಅವರನ್ನು ಎಚ್ಚರಿಸಿದರು. ಆ ನಾಯಕರುಗಳು ಯಾರೆಂದರೆ: ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರೆಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ ಮತ್ತು ಹೆದ್ಲ್ಯೆಯನ ಮಗನಾದ ಅಮಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯನೂ, ಮೆಷಿಲ್ಲೇಮೋತನ ಮಗ ಬೆರೆಕ್ಯನೂ, ಶಲ್ಲೂಮನ ಮಗ ಹಿಜ್ಕೀಯನೂ, ಹದ್ಲೈಯನ ಮಗ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧವಾಗಿ ಎದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:12
5 ತಿಳಿವುಗಳ ಹೋಲಿಕೆ  

ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.


ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.


ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಇಲ್ಲವಾದರೆ ಯೆಹೋವನ ಕೋಪಾಗ್ನಿಯೂ ನಿಮ್ಮ ಮೇಲೆ ಉರಿಯುತ್ತದೆಯಷ್ಟೇ” ಎಂದನು.


ಅವರಿಗೆ, “ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿರಿ; ನೀವು ನಮ್ಮ ಪಾಪ ಅಪರಾಧಗಳ ಜೊತೆಯಲ್ಲಿ ಯೆಹೋವನಿಗೆ ವಿರುದ್ಧವಾದ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುವಿರಾ? ನಮ್ಮ ಅಪರಾಧವು ದೊಡ್ಡದು; ಇಸ್ರಾಯೇಲರ ಮೇಲಿರುವ ದೈವಕೋಪವು ಉಗ್ರವಾಗಿದೆ” ಎಂದು ಹೇಳಿದರು.


ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ನಪಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು