Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಮೇಲೆ ಅವರು ಅರಮನೆಗೆ ಹೋಗಿ, ಅರಸ ಹಿಜ್ಕೀಯನಿಗೆ, “ನಾವು ಸರ್ವೇಶ್ವರನ ಆಲಯವನ್ನು ಪೂರ್ತಿಯಾಗಿ ಶುದ್ಧೀಕರಿಸಿದೆವು. ಬಲಿಪೀಠವನ್ನು, ಅದರ ಉಪಕರಣಗಳನ್ನು, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು ಹಾಗು ಅದರ ಸಾಮಗ್ರಿಗಳನ್ನೂ ಶುದ್ಧಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಮೇಲೆ ಅವರು ಅರಮನೆಯೊಳಕ್ಕೆ ಹೋಗಿ ಅರಸನಾದ ಹಿಜ್ಕೀಯನಿಗೆ - ನಾವು ಯೆಹೋವನ ಸಮಸ್ತಾಲಯವನ್ನೂ ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಅದರ ಸಾಮಾನುಗಳನ್ನೂ ಶುದ್ಧಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅನಂತರ ಅವರು ಅರಸನಾದ ಹಿಜ್ಕೀಯನ ಬಳಿಗೆ ಹೋಗಿ, “ಅರಸನಾದ ಹಿಜ್ಕೀಯನೇ, ನಾವು ದೇವಾಲಯವನ್ನೂ ಯಜ್ಞವೇದಿಕೆಯನ್ನೂ ದೇವಾಲಯದ ಸಾಮಾಗ್ರಿಗಳನ್ನೂ ಶುದ್ಧ ಮಾಡಿದೆವು. ರೊಟ್ಟಿಯನ್ನಿಡುವ ಮೇಜನ್ನೂ ಶುದ್ಧ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರ ಆಲಯವನ್ನೆಲ್ಲಾ, ದಹನಬಲಿಪೀಠವನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು, ಅದರ ಎಲ್ಲಾ ಪಾತ್ರೆಗಳನ್ನೂ ಶುದ್ಧಿಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:18
6 ತಿಳಿವುಗಳ ಹೋಲಿಕೆ  

ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.


ಇದಲ್ಲದೆ ಸೊಲೊಮೋನನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳವು ಆಗಿತ್ತು.


ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.


ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಆಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.


ಅರಸನಾದ ಆಹಾಜನು ತನ್ನ ಆಳ್ವಿಕೆಯಲ್ಲಿ ದೈವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ತಿರುಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು