Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರು ಸರಕಾರಿ, ದೇವಾಲಯ ಹಾಗು ಯೆಹೂದಪ್ರಜೆ ಇವುಗಳಿಗಾಗಿ ದೋಷಪರಿಹಾರಕ ಬಲಿಯರ್ಪಿಸುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಹೋತ, ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕ ಆರೋನನ ಸಂತಾನದವರಿಗೆ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿ ಮಾಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ಸರಕಾರ ದೇವಾಲಯ ಯೆಹೂದಪ್ರಜೆ ಇವುಗಳಿಗೋಸ್ಕರ ದೋಷಪರಿಹಾರಕಯಜ್ಞಮಾಡುವದಕ್ಕಾಗಿ ಹೋರಿ ಟಗರು ಕುರಿಮರಿ ಹೋತ ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಮಾಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಆಡುಗಳನ್ನೂ ತಂದರು. ಈ ಪ್ರಾಣಿಗಳನ್ನೆಲ್ಲಾ ಇಡೀ ಯೆಹೂದ ಪ್ರಾಂತ್ಯದಲ್ಲಿರುವ ಪ್ರಜೆಯವರಿಗಾಗಿ, ದೇವಾಲಯದ ಶುದ್ಧೀಕರಣಕ್ಕಾಗಿ ಮತ್ತು ಯೆಹೂದ ರಾಜ್ಯಕ್ಕಾಗಿ ಪಾಪಪರಿಹಾರ ಯಜ್ಞವಾಗಿ ಅರ್ಪಿಸಿದರು. ಅರಸನಾದ ಹಿಜ್ಕೀಯನು ಆರೋನನ ಸಂತತಿಯವರಾದ ಯಾಜಕರಿಗೆ ಆ ಪಶುಗಳನ್ನು ಯೆಹೋವನ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಮಾಡಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ರಾಜ್ಯಕ್ಕೋಸ್ಕರವೂ, ಪರಿಶುದ್ಧ ಸ್ಥಾನಕ್ಕೋಸ್ಕರವೂ, ಯೆಹೂದಕ್ಕೋಸ್ಕರವೂ ದೋಷಪರಿಹಾರದ ಬಲಿಯಾಗಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ, ಏಳು ಕುರಿಮರಿಗಳನ್ನೂ, ಏಳು ಮೇಕೆಗಳನ್ನೂ ತಂದರು. ಆಗ ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವ ದೇವರ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:21
12 ತಿಳಿವುಗಳ ಹೋಲಿಕೆ  

ಹಬ್ಬದ ಏಳು ದಿನಗಳಲ್ಲಿಯೂ ಯೆಹೋವನಿಗೆ ಸಮರ್ಪಿಸತಕ್ಕ ಸರ್ವಾಂಗಹೋಮಕ್ಕಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಪೂರ್ಣಾಂಗವಾದ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಒದಗಿಸಲಿ ಮತ್ತು ದೋಷಪರಿಹಾರಕ ಯಜ್ಞವಾಗಿ ಪ್ರತಿ ದಿನವೂ ಒಂದು ಹೋತವನ್ನು ಕೊಡಲಿ.


ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.


ದೇಶಾಂತರದ ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲರ ದೇವರಿಗೆ ತೊಂಭತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ಸಮಸ್ತ ಇಸ್ರಾಯೇಲರ ನಿಮಿತ್ತವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮವೇ.


ಯೆಹೋವನ ಒಡಂಬಡಿಕೆ ಮಂಜೂಷವನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದ್ದರಿಂದ ಏಳು ಹೋರಿಗಳನ್ನೂ ಮತ್ತು ಏಳು ಟಗರುಗಳನ್ನೂ ಯಜ್ಞಮಾಡಿದರು.


ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು” ಎಂದು ಹೇಳಿದನು


ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.


ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ಇಸ್ರಾಯೇಲರ ಜನಸಮೂಹದಿಂದ ದೋಷಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.


ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು