2 ಪೂರ್ವಕಾಲ ವೃತ್ತಾಂತ 29:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
25 ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.
25 ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕಾಗಿ ಲೇವಿಯರನ್ನು ನೇಮಿಸಿದನು. ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿ ನಾತಾನ್ ಇವರ ಆಜ್ಞಾನುಸಾರ ಸರ್ವೇಶ್ವರನ ಆಲಯದಲ್ಲಿ ಈ ಗಾಯಕರನ್ನು ಇರಿಸಿದ್ದನು. ಸರ್ವೇಶ್ವರಸ್ವಾಮಿಯೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದರು.
25 ದಾವೀದನೂ ಅರಸನ ದರ್ಶಿಯಾಗಿದ್ದ ಗಾದನೂ ಮತ್ತು ಪ್ರವಾದಿಯಾಗಿದ್ದ ನಾತಾನನೂ ಆಜ್ಞಾಪಿಸಿದಂತೆ, ಅರಸನಾದ ಹಿಜ್ಕೀಯನು ಲೇವಿಯರನ್ನು ತಾಳ, ತಂತಿವಾದ್ಯ ಮತ್ತು ಕಿನ್ನರಿಗಳೊಂದಿಗೆ ದೇವಾಲಯದಲ್ಲಿ ಇರಿಸಿದನು. ಈ ಆಜ್ಞೆಯು ಯೆಹೋವನಿಂದ ಪ್ರವಾದಿಗಳ ಮೂಲಕ ಬಂದಿತ್ತು.
25 ಇದಲ್ಲದೆ ಅವನು ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನೂ ಹಿಡಿದ ಲೇವಿಯರನ್ನು ದಾವೀದನೂ, ಅರಸನ ದರ್ಶಿಯಾದ ಗಾದನೂ, ಪ್ರವಾದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ, ಯೆಹೋವ ದೇವರ ಆಲಯದಲ್ಲಿ ನಿಲ್ಲಿಸಿದನು. ಏಕೆಂದರೆ ಯೆಹೋವ ದೇವರ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹೀಗೆ ಇತ್ತು.
ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.
ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ.
ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.
ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.
ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.
ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.