Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಇದಲ್ಲದೆ, ಯಾಜಕರು ಸಮರ್ಪಿಸಬೇಕಾಗಿದ್ದ ದಹನಬಲಿ, ಶಾಂತಿಸಮಾಧಾನ ಬಲಿಗಳ ಕೊಬ್ಬು ಹಾಗು ದಹನಬಲಿ ಸಂಬಂಧವಾದ ಪಾನದ್ರವ್ಯ ಇವೂ ಅಪಾರವಾಗಿ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ತಮ್ಮನ್ನು ಶುದ್ಧಪಡಿಸಿಕೊಳ್ಳುವದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು. ಇದಲ್ಲದೆ ಯಾಜಕರು ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನಯಜ್ಞಗಳ ಕೊಬ್ಬು, ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆ ದಿವಸ ಎಷ್ಟೋ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಪಾನದ್ರವ್ಯದ ಹೋಮಗಳನ್ನೂ ಸಮರ್ಪಿಸಿದರು. ಹೀಗೆ ದೇವಾಲಯದಲ್ಲಿ ಆರಾಧನೆಯು ಮತ್ತೆ ಪ್ರಾರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇದಲ್ಲದೆ ದಹನಬಲಿಗಳೂ, ಸಮಾಧಾನದ ಬಲಿಗಳ ಕೊಬ್ಬೂ, ದಹನಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳವಾಗಿದ್ದವು. ಹೀಗೆ ಯೆಹೋವ ದೇವರ ಆಲಯದ ಸೇವೆಯು ಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:35
11 ತಿಳಿವುಗಳ ಹೋಲಿಕೆ  

ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.


ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.


ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು.


ಆದರೆ ಎಲ್ಲವೂ ಯೋಗ್ಯವಾಗಿಯೂ ಹಾಗೂ ಕ್ರಮದಿಂದಲೂ ನಡೆಯಲಿ.


ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು.


ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು.


ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಕೀಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.


ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು