Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಕೀಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಹೀಗೆ ಸರ್ವೇಶ್ವರನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ಯಾರೂ ಗಮನಿಸುವುದಕ್ಕೆ ಮುಂಚೆಯೇ, ದೇವರು ತಾವೇ ತಮ್ಮ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲ ಜನರೂ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃಸ್ಥಾಪಿತವಾಯಿತು. ಯಾರೂ ನೆನಸದೆ ಇರುವಲ್ಲಿ ದೇವರು ತಾನೇ ತನ್ನ ಪ್ರಜೆಗಳಿಗೋಸ್ಕರ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲಾ ಜನರೂ ಸಂತೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ದೇವರು ಅವುಗಳನ್ನು ತನ್ನ ಜನರಿಗಾಗಿ ಸಿದ್ಧಪಡಿಸಿದ್ದಕ್ಕಾಗಿಯೂ ಅದನ್ನು ಅಲ್ಪಕಾಲಾವಧಿಯಲ್ಲಿ ಮಾಡಿದ್ದಕ್ಕಾಗಿಯೂ ಹಿಜ್ಕೀಯನು ಮತ್ತು ಯೆಹೂದದ ಜನರು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ದೇವರು ತಮ್ಮ ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ, ಜನರೆಲ್ಲರೂ ಸಂತೋಷಪಟ್ಟರು. ಏಕೆಂದರೆ ಈ ಕಾರ್ಯವು ತ್ವರೆಯಾಗಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:36
10 ತಿಳಿವುಗಳ ಹೋಲಿಕೆ  

ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.


ಹೃದಯದ ಸಂಕಲ್ಪವು ಮನುಷ್ಯನ ವಶವು, ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.


ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.


ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.


ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.


ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು