Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೈವಪುರುಷನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ, ಸೇವೆಯನ್ನು ಸಲ್ಲಿಸಿದರು. ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೋಶೆಯ ಕಟ್ಟಳೆಯ ಪ್ರಕಾರವಾಗಿ ಅವರು ತಮ್ಮತಮ್ಮ ಸ್ಥಾನಗಳಲ್ಲಿ ನಿಂತುಕೊಂಡು ಸೇವೆ ನಡಿಸಿದರು. ಲೇವಿಯರು ರಕ್ತವನ್ನು ಯಾಜಕರಿಗೆ ಕೊಟ್ಟರು. ಯಾಜಕರು ಆ ರಕ್ತವನ್ನು ವೇದಿಕೆಯ ಮೇಲೆ ಚಿಮಿಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆಯ ನಿಯಮದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು, ಯಾಜಕರು, ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:16
8 ತಿಳಿವುಗಳ ಹೋಲಿಕೆ  

ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ.


ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:


ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.


ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


“‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.


ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.


ದೇವರ ಮನುಷ್ಯನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಎಣಿಸಲ್ಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು