Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜನಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಪಡಿಸಿಕೊಳ್ಳದೆ ಇದ್ದುದರಿಂದ, ಅಶುದ್ಧರಾಗಿದ್ದವರೆಲ್ಲರ ಬಲಿಪಶುಗಳು ಸರ್ವೇಶ್ವರನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು. ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದದರಿಂದ ಅಶುದ್ಧರಾದವರೆಲ್ಲರ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜನಸಮೂಹದವರಲ್ಲಿ ಎಷ್ಟೋ ಮಂದಿ ಪವಿತ್ರ ಸೇವೆಗಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಆದ್ದರಿಂದ ಪಸ್ಕದ ಕುರಿಯನ್ನು ಅವರು ವಧಿಸಲಾಗಲಿಲ್ಲ. ಲೇವಿಯರೇ ಅವರ ಬದಲಾಗಿ ಪಸ್ಕದ ಕುರಿಯನ್ನು ವಧಿಸಿದರು. ಹೀಗೆ ಲೇವಿಯರು ಪ್ರತಿಯೊಂದು ಕುರಿಯನ್ನು ದೇವರಿಗಾಗಿ ಪರಿಶುದ್ಧಗೊಳಿಸಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಜನರಲ್ಲಿ ಅನೇಕರು ಅಪರಿಶುದ್ಧರಾಗಿದ್ದರು. ಆದ್ದರಿಂದ ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವುದಕ್ಕೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:17
6 ತಿಳಿವುಗಳ ಹೋಲಿಕೆ  

ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.


ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.


ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು.


ಈ ಜನರು ಮೋಶೆಗೆ “ಮನುಷ್ಯನ ಶವಸೋಂಕಿದರಿಂದ ನಾವು ಅಶುದ್ಧರಾದೆವು. ನಾವು ಉಳಿದ ಇಸ್ರಾಯೇಲರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವುದಕ್ಕೆ ಅಪ್ಪಣೆಯಿಲ್ಲವೋ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು