Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜನರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಬೇಕೆಂಬುದಾಗಿ ಬೇರ್ಷೆಬದಿಂದ ದಾನಿನವರೆಗೂ ವಾಸಿಸುವ ಇಸ್ರಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಆವರೆಗೂ, ಜನರಲ್ಲಿ ಹೆಚ್ಚುಮಂದಿ ಧರ್ಮಶಾಸ್ತ್ರವಿಧಿಯ ಮೇರೆಗೆ, ಪಾಸ್ಕವನ್ನು ಆಚರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಜನರು ಇಸ್ರಾಯೇಲ್‍ದೇವರಾದ ಯೆಹೋವನಿಗೋಸ್ಕರ ಪಸ್ಕವನ್ನಾಚರಿಸುವದಕ್ಕಾಗಿ ಯೆರೂಸಲೇವಿುಗೆ ಬರಬೇಕು ಎಂಬದಾಗಿ ಬೇರ್ಷೆಬದಿಂದ ದಾನಿನವರೆಗೂ ವಾಸಿಸುವ ಇಸ್ರಾಯೇಲ್ಯರೊಳಗೆ ಡಂಗುರಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆವರೆಗೂ ಧರ್ಮಶಾಸ್ತ್ರವಿಧಿಯ ಮೇರೆಗೆ ಪಸ್ಕವನ್ನು ಆಚರಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದನ್ನು ಬೇರ್ಷೆಬದಿಂದ ಹಿಡಿದು ದಾನ್ ಪಟ್ಟಣದವರೆಗಿನ ಜನರಿಗೆಲ್ಲಾ ಪ್ರಕಟಿಸಿದರು. ಇಸ್ರೇಲಿನ ದೇವರಾದ ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಲು ಎಲ್ಲರಿಗೂ ಆಹ್ವಾನಿಸಿದರು. ಮೋಶೆಯು ಹೇಳಿದ್ದ ನಿಯಮಕ್ಕನುಸಾರವಾಗಿ ಪಸ್ಕಹಬ್ಬವನ್ನು ಎಷ್ಟೋ ಜನರು ಅನೇಕ ವರ್ಷಗಳಿಂದ ಆಚರಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:5
16 ತಿಳಿವುಗಳ ಹೋಲಿಕೆ  

ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.


ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.


ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು.


ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,


ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿನಗಳಿಂದ ಇಸ್ರಾಯೇಲರಲ್ಲಿ ನಡೆಯಲೇ ಇಲ್ಲ. ಯೋಷೀಯನೂ, ಯಾಜಕರೂ, ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲರು, ಯೆಹೂದ್ಯರು, ಯೆರೂಸಲೇಮಿನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.


ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


“‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.


ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು