Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈಗ ನಿಮ್ಮ ಪೂರ್ವಜರಂತೆ ಆಜ್ಞೆಗೆ ಮಣಿಯದವರಾಗಬೇಡಿ. ಸರ್ವೇಶ್ವರನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಸರ್ವೇಶ್ವರ ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಅವರನ್ನು ಅವಲಂಬಿಸಿರಿ. ಆಗ ನಿಮ್ಮ ಮೇಲಿರುವ ಅವರ ಉಗ್ರಕೋಪ ತೊಲಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈಗ ನಿಮ್ಮ ಪಿತೃಗಳಂತೆ ಆಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಆತನನ್ನು ಸೇವಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಮ್ಮ ಪೂರ್ವಿಕರ ಹಾಗೆ ಮೊಂಡರಾಗಿರಬೇಡಿ. ನೀವು ಪೂರ್ಣಮನಸ್ಸಿನಿಂದ ದೇವರಿಗೆ ವಿಧೇಯರಾಗಿರಿ. ಆತನ ಶಾಶ್ವತವಾದ ಮಹಾಪವಿತ್ರಸ್ಥಳಕ್ಕೆ ಬನ್ನಿರಿ. ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿರಿ ಮತ್ತು ಆತನ ಸೇವೆಮಾಡಿರಿ. ಆಗ ನಿಮ್ಮ ಮೇಲಿರುವ ಆತನ ಕೋಪವು ಶಮನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:8
30 ತಿಳಿವುಗಳ ಹೋಲಿಕೆ  

ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.


ಅದಲ್ಲದೆ ಯೆಹೋವನು ಮೋಶೆಗೆ, “ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ. ಇವರು ಮೊಂಡುತನವುಳ್ಳ ಜನರಾಗಿದ್ದಾರೆ


ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.


ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ಬಿಡಾರವಾಗಿರುವನು.


ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.


ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.


ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.


ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.


ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.


ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು.


ದೇವರೇ, ನಿನ್ನ ಮೆರವಣಿಗೆ ಶೋಭಿಸುತ್ತದೆ; ನನ್ನ ಅರಸನಾದ ದೇವರು ತನ್ನ ಪರಿಶುದ್ಧಾಲಯಕ್ಕೆ ಮೆರವಣಿಗೆಯಾಗಿ ಪ್ರವೇಶಿಸುತ್ತಾನೆ.


ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.


ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿಕೊಂಡು ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.


ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.


ಅವರಿಗೆ, “ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿರಿ; ನೀವು ನಮ್ಮ ಪಾಪ ಅಪರಾಧಗಳ ಜೊತೆಯಲ್ಲಿ ಯೆಹೋವನಿಗೆ ವಿರುದ್ಧವಾದ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುವಿರಾ? ನಮ್ಮ ಅಪರಾಧವು ದೊಡ್ಡದು; ಇಸ್ರಾಯೇಲರ ಮೇಲಿರುವ ದೈವಕೋಪವು ಉಗ್ರವಾಗಿದೆ” ಎಂದು ಹೇಳಿದರು.


ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಇಲ್ಲವಾದರೆ ಯೆಹೋವನ ಕೋಪಾಗ್ನಿಯೂ ನಿಮ್ಮ ಮೇಲೆ ಉರಿಯುತ್ತದೆಯಷ್ಟೇ” ಎಂದನು.


ಎಲ್ಲಾ ಅಧಿಪತಿಗಳೂ ದಂಡಿನವರೂ ಅರಸನಾದ ದಾವೀದನ ಎಲ್ಲಾ ಮಕ್ಕಳೂ ಅವನಿಗೆ ಅಧೀನರಾದರು.


ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.


ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.


ನಿಮ್ಮ ದೇವರಾದ ಯೆಹೋವನು ನಿಮಗೆ ನೇಮಿಸಿದ ಆಜ್ಞಾವಿಧಿನಿಯಮಗಳನ್ನು ಅನುಸರಿಸಲೇಬೇಕು.


ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.


ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.


ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.


ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.


ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.


ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು