Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹಿಜ್ಕೀಯನು ಒಂದೇ ಬಲಿಪೀಠದ ಮುಂದೆ ಆರಾಧನೆಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ ಜೆರುಸಲೇಮಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿದನು ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆತನ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹಿಜ್ಕೀಯನು ತಾನೇ ಪೂಜಾಸ್ಥಳಗಳನ್ನೂ ವೇದಿಕೆಗಳನ್ನೂ ತೆಗೆದುಹಾಕಿದ್ದಾನೆ. ಒಂದೇ ಒಂದು ಧೂಪವೇದಿಕೆಯಲ್ಲಿ ಧೂಪಹಾಕಿ ಆರಾಧಿಸಬೇಕೆಂದು ಅವನು ಯೆಹೂದ ಮತ್ತು ಜೆರುಸಲೇಮಿನ ಜನರಾದ ನಿಮಗೆ ಹೇಳುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈ ಹಿಜ್ಕೀಯನು ಅವನ ಪೂಜಾಸ್ಥಳಗಳನ್ನೂ, ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ, ‘ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು, ಅದರ ಮೇಲೆ ಧೂಪವನ್ನರ್ಪಿಸಬೇಕು,’ ಎಂದು ಹೇಳಿದ್ದಾನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:12
14 ತಿಳಿವುಗಳ ಹೋಲಿಕೆ  

ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.


ಒಂದು ವೇಳೆ ನೀನು, ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ’ ಎಂದು ಹೇಳಬಹುದು. ಹಿಜ್ಕೀಯನು, ‘ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!


ಇದಲ್ಲದೆ ಸೊಲೊಮೋನನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳವು ಆಗಿತ್ತು.


ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,


ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.


ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,


ಹಿಜ್ಕೀಯನು, ‘ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು’ ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ.


ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನೂ ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.


ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು