Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದುದರಿಂದ ಅವನ ನಾಡಿನಲ್ಲಾದ ಅದ್ಭುತಕರವಾದ ಮಾರ್ಪಾಟುಗಳನ್ನು ಪರಿಶೀಲಿಸುವುದಕ್ಕಾಗಿ ಬಾಬಿಲೋನಿಯದ ಅಧಿಪತಿಗಳು ರಾಯಭಾರಿಗಳನ್ನು ಅವನ ಬಳಿಗೆ ಕಳುಹಿಸಿದರು. ಅವರು ಬಂದಾಗ, ಅವನನ್ನು ಪರೀಕ್ಷಿಸುವುದಕ್ಕಾಗಿ ಹಾಗು ಅವನ ಅಂತರಾಳವನ್ನು ತಿಳಿದುಕೊಳ್ಳುವುದಕ್ಕಾಗಿ ದೇವರು ಅವನನ್ನು ಕೈಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದದರಿಂದ ಅವನ ದೇಶದಲ್ಲುಂಟಾದ ಅದ್ಭುತದ ವಿಷಯವನ್ನು ವಿಚಾರಿಸುವದಕ್ಕಾಗಿ ಬಾಬೆಲಿನ ಪ್ರಭುಗಳ ರಾಯಭಾರಿಗಳು ಅವನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವದಕ್ಕೂ ಅವನ ಸರ್ವಾಂತರ್ಯವನ್ನು ತಿಳುಕೊಳ್ಳುವದಕ್ಕೂ ಅವನನ್ನು ಕೈಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಒಂದು ಸಾರಿ ಬಾಬಿಲೋನಿನವರು ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿದರು. ಅವರು ದೇಶದಲ್ಲಿ ಆದ ಅದ್ಭುತ ವಿಷಯದ ಬಗ್ಗೆ ವಿಚಾರಿಸಿದರು. ಅವರು ಹಿಜ್ಕೀಯನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವುದಕ್ಕಾಗಿಯೂ ಅವನ ಹೃದಯದಲ್ಲಿದ್ದ ಪ್ರತಿಯೊಂದು ಆಲೋಚನೆಯನ್ನು ತಿಳಿದುಕೊಳ್ಳುವುದಕ್ಕಾಗಿಯೂ ಅವನನ್ನು ತೊರೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:31
24 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.


ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.


ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.


ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು


ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ಆಗ ಅವಳು, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನು ಎಚ್ಚೆತ್ತು, ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.


ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.


ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ.


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.


ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು