Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಹಿಜ್ಕೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಲು, ಅವನ ಶವವನ್ನು ದಾವೀದವಂಶದವರ ಕುಟುಂಬದ ಸ್ಮಶಾನಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಶವಸಂಸ್ಕಾರ ನಡೆಯುವಾಗ ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗ ಮನಸ್ಸೆ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹಿಜ್ಕೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬಶ್ಮಶಾನ ಭೂವಿುಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಹಿಜ್ಕೀಯನು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ದಾವೀದ ವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನು ಸತ್ತಾಗ ಎಲ್ಲಾ ಯೆಹೂದದ ಜನರೂ ಜೆರುಸಲೇಮಿನ ಜನರೂ ಅವನಿಗೆ ಹೆಚ್ಚಾದ ಗೌರವವನ್ನು ಕೊಟ್ಟರು. ಹಿಜ್ಕೀಯನ ಬದಲು ಅವನ ಮಗನಾದ ಮನಸ್ಸೆಯು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದುದರಲ್ಲಿ ಅವನನ್ನು ಹೂಳಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ, ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:33
15 ತಿಳಿವುಗಳ ಹೋಲಿಕೆ  

ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.


ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.


ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು.


ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.


ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು” ಎಂದು ಹೇಳಿದಳು.


ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.


ಆರೋನನು ಸತ್ತುಹೋದ ಸಂಗತಿಯನ್ನು ಇಸ್ರಾಯೇಲ್ ಸಮೂಹದವರು ಕೇಳಿ ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.


ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.


ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.


ಅವನು ಎಂದಿಗೂ ಕದಲುವುದಿಲ್ಲ; ನೀತಿವಂತನನ್ನು ಯಾವಾಗಲೂ ಸ್ಮರಿಸುವರು.


ಸೇವಕರು ಅವನನ್ನು ಯುದ್ಧರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇಮಿಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು