Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬೆಲಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:11
19 ತಿಳಿವುಗಳ ಹೋಲಿಕೆ  

ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,


ನಾನು ತಪ್ಪಿಸಿಕೊಂಡು ಹೋಗದಂತೆ ನನ್ನ ಸುತ್ತಲು ಗೋಡೆಯನ್ನು ಕಟ್ಟಿ, ನನಗೆ ಭಾರವಾದ ಬೇಡಿಯನ್ನು ಹಾಕಿದ್ದಾನೆ.


“ಇದೂ ನಿನಗೆ ಅಸಾಧ್ಯವಾಗುವುದಾದರೆ ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ನಿನ್ನಿಂದ ಹೇಗೆ ಸಾಧ್ಯವಾಗುತ್ತದೆ? ರಥಾಶ್ವಬಲಗಳಿಗಾಗಿ ನೀನು ಐಗುಪ್ತ್ಯರನ್ನು ನಂಬಿಕೊಂಡಿರುವಂತೆ ಕಾಣುತ್ತದೆ.


ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?


ನಮ್ಮ ಪಾಪಗಳ ನಿಮಿತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇಮಿಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತಾ ಇದೆ. ದೈಹಿಕವಾಗಿ ನಮ್ಮ ಮೇಲೆ ಹಾಗೂ ನಮ್ಮ ಪಶುಗಳ ಮೇಲೆ ಅವರು ಮನಸ್ಸಿಗೆ ಬಂದಂತೆ ಅಧಿಕಾರ ನಡಿಸುತ್ತಿದ್ದಾರೆ. ನಾವು ಮಹಾಸಂಕಟದಲ್ಲಿದ್ದೇವೆ” ಎಂದು ಪ್ರಾರ್ಥಿಸಿದರು.


ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.


ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.


ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.


ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ’” ಎಂದು ಹೇಳಿದನು.


ಮನಸ್ಸೆಯ ಉಳಿದ ಚರಿತ್ರೆಯೂ ಅವನ ಎಲ್ಲಾ ಕ್ರಿಯೆಗಳೂ, ಅವನು ಮಾಡಿದ ಪಾಪಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.


ಯೆಹೋವನು ಫಿಲಿಷ್ಟಿಯರನ್ನೂ, ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದನು.


ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ಅರಸರು ಹಾಕಿದ ಬಂಧನವನ್ನು ಬಿಚ್ಚಿಬಿಟ್ಟು ಅವರ ಸೊಂಟಕ್ಕೆ ನಡುಕಟ್ಟನ್ನು ಬಿಗಿಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು