Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರನ ಬಲಿಪೀಠವನ್ನು ಪುನಃ ಕಟ್ಟಿಸಿ, ಅದರ ಮೇಲೆ ಶಾಂತಿಸಮಾಧಾನ ಬಲಿಗಳನ್ನೂ ಕೃತಜ್ಞತಾ ಬಲಿಗಳನ್ನೂ ಅರ್ಪಿಸಿದನು. ಇಸ್ರಯೇಲ್ ದೇವರಾದ ಸರ್ವೇಶ್ವರನನ್ನೇ ಅವಲಂಬಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನ ಯಜ್ಞವೇದಿಯನ್ನು ತಿರಿಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಅರ್ಪಿಸಿ ಇಸ್ರಾಯೇಲ್‍ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನ ಯಜ್ಞವೇದಿಕೆಯನ್ನು ಕಟ್ಟಿಸಿ ಅದರಲ್ಲಿ ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದನು. ಯೆಹೂದದಲ್ಲಿದ್ದ ಎಲ್ಲಾ ಜನರೂ ದೇವರಾದ ಯೆಹೋವನ ಸೇವೆಮಾಡುವಂತೆ ಆಜ್ಞೆ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ಯೆಹೋವ ದೇವರ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ಸಮಾಧಾನದ ಬಲಿಗಳನ್ನೂ, ಸ್ತೋತ್ರದ ಬಲಿಗಳನ್ನೂ ಅರ್ಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:16
11 ತಿಳಿವುಗಳ ಹೋಲಿಕೆ  

ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.


ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.


ಯೆಹೂದ್ಯರಿಗೆ, “ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರದ ವಿಧಿಗಳನ್ನು ಕೈಕೊಳ್ಳಿರಿ” ಎಂದು ಆಜ್ಞಾಪಿಸಿದನು.


ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿ ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿದನು.


ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.


ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.


ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡೆದು ಹಾಕಿ, ಅಶೇರ ವಿಗ್ರಹ ಸ್ತಂಭಗಳನ್ನು ಕೆಡವಿ ಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು