Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮನಸ್ಸೆ ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮನಸ್ಸೆಯು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮನಸ್ಸೆಯು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ಅವನ ಸ್ವಂತ ಅರಮನೆಯಲ್ಲಿ ಸಮಾಧಿಮಾಡಿದರು. ಮನಸ್ಸೆಯ ಮಗನಾದ ಅಮೋನನು ಅವನ ಬದಲಿಗೆ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನನ್ನು ಅವನ ಅರಮನೆಯಲ್ಲಿ ಹೂಳಿಟ್ಟರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:20
9 ತಿಳಿವುಗಳ ಹೋಲಿಕೆ  

ಹಿಜ್ಕೀಯನ ಮಗನು ಮನಸ್ಸೆಯನು. ಮನಸ್ಸೆಯ ಮಗನು ಆಮೋನನು.


ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.


ಮನಸ್ಸೆಯ ಮಗ ಆಮೋನ್; ಆಮೋನನ ಮಗ ಯೋಷೀಯ.


ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.


ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು.


ಆಮೋನನ ಮಗನೂ, ಯೆಹೂದದ ಅರಸನಾದ ಯೋಷೀಯನ ಕಾಲದಲ್ಲಿ ಕೂಷಿಯನ ಮಗನೂ, ಗೆದಲ್ಯನ ಮೊಮ್ಮಗನೂ, ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ.


ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ರಾಜ್ಯಭಾರಮಾಡಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ. ಅವನು ಯಾರಿಗೂ ಇಷ್ಟವಿಲ್ಲದವನಾಗಿ ಗತಿಸಿಹೋದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜರ ಸಮಾಧಿಗಳಲ್ಲಿ ಅವನನ್ನು ಸಮಾಧಿಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು