Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡೆಸುತ್ತಿದ್ದರು; ಲೇವಿಯರಲ್ಲಿ ಕೆಲವರು ಲೇಖಕರೂ, ಕೆಲವರು ಅಧಿಕಾರಿಗಳೂ, ದ್ವಾರಪಾಲಕರೂ ಲೇವಿಯರೇ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನೋಡಿಕೊಳ್ಳುತ್ತಿದ್ದರು; ಎಲ್ಲ ಲೇಖಕರು, ಅಧಿಕಾರಿಗಳು ಹಾಗು ದ್ವಾರಪಾಲಕರು ಲೇವಿಯರೇ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡಿಸುತ್ತಿದ್ದರು; ಎಲ್ಲಾ ಲೇಖಕರೂ ಅಧಿಕಾರಿಗಳೂ ದ್ವಾರಪಾಲಕರೂ ಲೇವಿಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಕಾರ್ಮಿಕರ ಮೇಲೆಯೂ, ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ಮೇಲ್ವಿಚಾರಕರಾಗಿದ್ದರು. ಲೇವಿಯರಲ್ಲಿ ಕೆಲವರು ಕಾರ್ಯದರ್ಶಿಗಳೂ, ಬರಹಗಾರರೂ, ದ್ವಾರಪಾಲಕರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:13
17 ತಿಳಿವುಗಳ ಹೋಲಿಕೆ  

ಇತ್ತ ಯೆಹೂದ್ಯರು, “ಹೊರೆ ಹೊರುವವರ ಬಲವು ಕುಂದಿಹೋಯಿತು, ಧೂಳಿನ ರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದ ಆಗುವುದಿಲ್ಲ” ಎಂದರು.


ಅವರಲ್ಲಿ ಹೊರೆಹೊರುವುದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ, ಕಲ್ಲುಗಣಿಗಳಲ್ಲಿ ಕೆಲಸಮಾಡುವುದಕ್ಕಾಗಿ ಎಂಭತ್ತು ಸಾವಿರ ಮಂದಿಯನ್ನೂ, ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇಮಿಸಿದನು.


ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು


ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.


ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.


ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.


ಈ ಇನ್ನೂರೈವತ್ತು ಮಂದಿ ಅರಸನಾದ ಸೊಲೊಮೋನನ ಮುಖ್ಯಾಧಿಕಾರಿಗಳೂ, ಪ್ರಜೆಗಳ ಮೇಲ್ವಿಚಾರಕರೂ ಆಗಿದ್ದರು.


ಮರ ಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು” ಎಂದನು.


ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.


ಯೆದುತೂನನ ಮಗನಾದ ಓಬೇದೆದೋಮ್ ಮತ್ತು ಹೋಸ ಇವರನ್ನು, ಅವರ ಆರುವತ್ತೆಂಟು ಸಹೋದರರನ್ನೂ ಅಲ್ಲೇ ಇರಿಸಿದನು.


ತಮ್ಮ ಸಹೋದರರೊಳಗೆ ಎರಡನೆಯ ದರ್ಜೆಯವರಾದ ಜೆಕರ್ಯ, ಬೇನ್, ಯಾಜೀಯೇಲ್ ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ ಎಲೀಫೆಲೇಹು, ಮಿಕ್ನೇಯ ದ್ವಾರಪಾಲಕರಾದ ಓಬೇದೆದೋಮ ಮತ್ತು ಯೆಗೀಯೇಲ್ ಇವರನ್ನು ನೇಮಿಸಿದನು.


ದ್ವಾರಪಾಲಕರಲ್ಲಿ ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್, ಇವರೂ ಮತ್ತು ಇವರ ಸಹೋದರರು. ಇವರಲ್ಲಿ ಶಲ್ಲೂಮನು ಪ್ರಮುಖನಾಗಿದ್ದನು.


ಊರಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು