Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಅಪ್ಪಣೆಯಾದಂತೆ ಆಕೆಯ ಬಳಿ ವಿಚಾರಿಸಿದರು. ಹಸ್ತನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡ. ಆಕೆ ಜೆರುಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಅಪ್ಪಣೆಯಾದಂತೆ ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇವಿುನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಹಿಲ್ಕೀಯನೂ ಅರಸನ ಸೇವಕರೂ ಪ್ರವಾದಿನಿಯಾಗಿದ್ದ ಹುಲ್ದಳ ಬಳಿಗೆ ಹೋದರು. ಆಕೆ ತೊಕ್ಹತನ ಮಗನಾದ ಶಲ್ಲೂಮನ ಹೆಂಡತಿಯಾಗಿದ್ದಳು. ತೊಕ್ಹತನು ಹಸ್ರನ ಮಗ. ಇವನು ಅರಸನ ಬಟ್ಟೆಬರೆಗಳ ಮುಖ್ಯಸ್ತನಾಗಿದ್ದನು. ಹುಲ್ದಳು ಜೆರುಸಲೇಮಿನ ಹೊಸ ಬಡಾವಣೆಯಲ್ಲಿ ವಾಸ ಮಾಡುತ್ತಿದ್ದಳು. ಅರಸನು ಹೇಳಿದ್ದನ್ನೆಲ್ಲಾ ಸೇವಕರು ಆಕೆಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಹಿಲ್ಕೀಯನೂ ಅರಸನ ಜನರೂ ಹಸ್ರನ ಮಗನೂ ತೊಕ್ಹತನ ಮಗನೂ ಪ್ರವಾದಿನಿ ಹುಲ್ದಳ ಬಳಿಗೆ ಹೋಗಿ ವಿಚಾರಿಸಿದರು. ಆಕೆಯು ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ, ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:22
9 ತಿಳಿವುಗಳ ಹೋಲಿಕೆ  

ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.


ಅವನಿಗೆ ಕನ್ಯೆಯರಾದ ನಾಲ್ಕುಮಂದಿ ಹೆಣ್ಣು ಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.


ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು,


ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು “ಹುಲ್ದ” ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ಯಾಜಕವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು.


ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ, ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲರಲ್ಲಿ ನ್ಯಾಯತೀರ್ಪನ್ನು ಮಾಡುತ್ತಿದ್ದಳು.


“ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.


ಹುಲ್ದಳು ಅವರಿಗೆ, ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ,


ಅದೇ ದಿನದಲ್ಲಿ ಮೀನುಬಾಗಿಲಿನಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿನಿಂದ ಭೀಕರ ಶಬ್ದವನ್ನು ಕೇಳುವಿರಿ, ಅಂತು ದೊಡ್ಡ ಗದ್ದಲವಾಗುವುದು” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು