Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ‘ಈ ನಾಡಿನ ಮೇಲೂ ಜನರ ಮೇಲೂ, ಜುದೇಯದ ಅರಸನ ಹಿಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲ ಶಾಪಗಳನ್ನು ಬರಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನು - ಈ ದೇಶದ ಮೇಲೆಯೂ ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನು ಹೇಳುವುದೇನೆಂದರೆ, ‘ನಾನು ಈ ಸ್ಥಳಕ್ಕೂ ಇಲ್ಲಿ ವಾಸಿಸುವವರಿಗೂ ಸಂಕಟವನ್ನು ಬರಮಾಡುವೆನು. ಯೆಹೂದ ದೇಶದ ಅರಸನ ಮುಂದೆ ಓದಿದಂಥ ಪುಸ್ತಕದಲ್ಲಿ ಬರೆಯಿಸಿದ ಎಲ್ಲಾ ಶಾಪಗಳನ್ನು ನಾನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:24
18 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು.


ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’” ಎಂದು ಹೇಳಿದನು.


ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.


“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.


ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ಇಸ್ರಾಯೇಲಿನ ದೇವರಾದ ಯೆಹೋವನೆಂಬ ನಾನು ಯೆರೂಸಲೇಮಿನವರ ಮೇಲೆಯೂ, ಯೆಹೂದದವರ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವರ ಎರಡು ಕಿವಿಗಳು ಬಿರಿದು ಹೋಗುವವು.


ಹುಲ್ದಳು ಅವರಿಗೆ, ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ,


“ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,


ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.


ನಾವು ನಮ್ಮ ಪೂರ್ವಿಕರ ಕಾಲದಿಂದ ಇಂದಿನ ವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ, ನಮ್ಮ ಅರಸರೂ ಮತ್ತು ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ, ಸೆರೆಗೂ, ಸುಲಿಗೆಗೂ, ಅಪಮಾನಕ್ಕೂ ಗುರಿಯಾದೆವು.


ಮೀಕಾಯನು ಜನರ ಮುಂದೆ ಗ್ರಂಥವನ್ನು ಓದುತ್ತಿರುವ ಬಾರೂಕನ ಬಾಯಿಂದ ತಾನು ಕೇಳಿದ್ದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಲು,


ಅವರಲ್ಲಿ ಪ್ರತಿಯೊಬ್ಬರೂ ಅನ್ನ ಮತ್ತು ನೀರಿನ ಕೊರತೆಯಿಂದ ಕುಗ್ಗಿ ತಮ್ಮ ಅಧರ್ಮದಿಂದ ನಾಶವಾಗಿ ಹೋಗುವರು.”


“ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು